ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ, ಸಮಾಜ ಸೇವೆ, ಪರಿಸರ ಮೊದಲಾಗಿ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕೊಂಗಾಡಿಯಪ್ಪನವರು  ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರಗಿದ್ದರು. ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಶಾಲೆ ಮುಂತಾದವುಗಳನ್ನು ಮೈಸೂರು ಮಹಾರಾಜರಿಂದ ಮಂಜೂರು ಮಾಡಿ ಮಾಡಿಸಿದರು. ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದ ಲೋಕಸೇವಾನಿರತ  ಡಿ.ಕೊಂಗಾಡಿಯಪ್ಪ ಅವರನ್ನು ದೊಡ್ಡಬಳ್ಳಾಪುರ ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ದೊಡ್ಡಬಳ್ಳಾಪುರ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ,  ದೊಡ್ಡಬಳ್ಳಾಪುರ ಅಭಿವೃದ್ಧಿಯನ್ನು ಪ್ರಧಾನವಾಗಿ ಚಿಂತಿಸುತ್ತಿದ್ದ, ಮೈಸೂರು ಮಹಾರಾಜರಿಂದ ಅಭಿವೃದ್ಧಿ ಕಾರ್ಯಗಳನ್ನು ಸಕಾರಗೊಳಿಸಿದರು. ಸೇವಾ ಮನೋಭಾವದಿಂದ ಜನಮನ್ನಣೆ ಪಡೆದಿದ್ದ ಕೊಂಗಾಡಿಯಪ್ಪ ಅವರು ಮೈಸೂರು ಮಹಾರಾಜರಿಂದ ಲೋಕಸೇವಾ ನಿರತ ಎಂಬ ಬಿರುದಿಗೆ ಪುರಸ್ಕೃತರಾದರು. ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಅರಿತಿದ್ದ  ಮತ್ತು ಶಿಕ್ಷಕರೂ ಆಗಿದ್ದ ಕೊಂಗಾಡಿಯಪ್ಪ ಅವರು ಎಲ್ಲಾ ವರ್ಗದ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕೊಂಗಾಡಿಯಪ್ಪ ಅವರ ಮನೆ ವಿದ್ಯಾರ್ಥಿನಿಲಯದಂತೆ. ಬಡ ವಿದ್ಯಾರ್ಥಿಗಳು ಅವರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ವಯಸ್ಕರ ಶಿಕ್ಷಣ ಶಾಲೆಯನ್ನು ಸಹ ನಡೆಸುತ್ತಿದ್ದರು.  ಕೊಂಗಾಡಿಯಪ್ಪ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ   ರಸ್ತೆಯ ಬದಿಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿದ್ದರು.. ದೊಡ್ಡಬಳ್ಳಾಪುರದಲ್ಲಿ ಮೈಸೂರು ಸಂಸ್ಥಾನಕ್ಕೆ ಮಾದರಿಯಾದ ಸ್ಕೌಟ್ ಗ್ರೂಪ್ ಸ್ಥಾಪಿಸಿದ್ದರು.  ಕೊಂಗಾಡಿಯಪ್ಪನವರ ಈ ಜನೋಪಯೋಗಿ ಮತ್ತು ಸೇವಾ ಕಾರ್ಯಗಳನ್ನು ಪರಿಗಣಿಸಿದ ಮೈಸೂರು ಮಹಾರಾಜರು  1918ರಲ್ಲಿ ಸಾರ್ವಜನಿಕ ಸೇವಾ ಪದಕ ಮತ್ತು 1931ರಲ್ಲಿ  ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್  ಲೋಕಸೇವಾನಿರತ ಎಂಬ ಬಿರುದು ನೀಡಿ ಗೌರವಿಸಿದರು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಉಪನ್ಯಾಸಕಿ ಪುಪ್ಪಾವತಿ, ಶಿಕ್ಷಕರುಗಳಾದ  ಕೋದಂಡರಾಮ್, ಎಚ್.ಎನ್.ಪ್ರಕಾಶ್, ರಮೇಶ್ ಪೂಜಾರಿ, ವಿದ್ಯಾರ್ಥಿನಿಲಯಪಾಲಕ ಅಣ್ಣಯ್ಯ, ಕಲಾವಿದ   ದರ್ಗಾಜೋಗಿಹಳ್ಳಿ ಮಲ್ಲೇಶ್, ಬಾಶೆಟ್ಟಿಹಳ್ಳಿ ಮಂಜುನಾಥ್, ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು  ಭಾಗವಹಿಸಿದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

7 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

8 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

13 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

15 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago