ಲೋಕಾಯುಕ್ತ ಪ್ರಕರಣ: ಸರ್ವೇಯರ್ ಗೆ ಜೈಲು ಶಿಕ್ಷೆ

2013 ರ ನವೆಂಬರ್ 29 ರಂದು ಜಮೀನು ಸರ್ವೇ ಕಾರ್ಯ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ರೈತನಿಂದ 3,000/- ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿತ ಸರ್ವೆಯರಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ರೈತ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಇವರಿಗೆ ಸೇರಿದ ಸಾಸಲು ಗ್ರಾಮದ ಸರ್ವೆ ನಂ. 26/2 ರಲ್ಲಿ 0-30 ಗುಂಟೆ ಜಮೀನಿನ ಸರ್ವೆ ಕಾರ್ಯ ಮಾಡಿದ್ದು, ಜಮೀನಿನ 11 ಇ ನಕ್ಷೆ ಮಾಡಿಕೊಡಲು ಸರ್ವೆಯರ್ ಡಿ.ಬಿ ಗೌಡ ಅವರು 3,000/- ರೂ. ಲಂಚಕ್ಕೆ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಅವರಲ್ಲಿ ಬೇಡಿಕೆ ಒತ್ತಾಯಿಸಿ, 2013 ಡಿಸೆಂಬರ್ 01 ರಂದು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ತಂಡಕ್ಕೆ ಸಿಕ್ಕಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣ್ಯ ಪ್ರಕರಣದ ತನಿಖೆ ನಡೆಸಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಜೆ ದಯಾನಂದ, ಆರೋಪಿತರ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸನ್ನಿದಾನಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣವು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದೆ.

ಪ್ರಕರಣದ ಸಂಬಂಧ 2026 ಜನವರಿ 30 ರಂದು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಕುಮಾರ್ ರವರು ಅಂತಿಮ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಆರೋಪಿತರಾದ ದೇವನಹಳ್ಳಿಯ ಖಾಸಗಿ ಸರ್ವೇಯರ್ ಡಿ.ಬಿ. ಗೌಡ ವಿರುದ್ಧ ಆರೋಪ ಸಾಬೀತಾಗಿರುವುದರಿಂದ ಆರೋಪಿತರಿಗೆ ಭ್ರಷ್ಟಾಚಾರ ತಡೆ ಕಾಯ್ದೆ ಕಲಂ:07 ರಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000/- ರೂ. ದಂಡ ಮತ್ತು ಕಲಂ 13(1)(ಡಿ)ರ/ಜೋ13(2)ರಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ರೂ 15,000/- ರೂ ದಂಡ ವಿಧಿಸಿದ್ದಾರೆ.

ದಂಡ ಕಟ್ಟಲು ತಪ್ಪಿದ್ದಲ್ಲಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ. ಕೆ. ವಂಶಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

2 hours ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

5 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

17 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

17 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

18 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

20 hours ago