ಲೋಕಾಯುಕ್ತ ಪ್ರಕರಣ: ಸರ್ವೇಯರ್ ಗೆ ಜೈಲು ಶಿಕ್ಷೆ

2013 ರ ನವೆಂಬರ್ 29 ರಂದು ಜಮೀನು ಸರ್ವೇ ಕಾರ್ಯ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ರೈತನಿಂದ 3,000/- ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿತ ಸರ್ವೆಯರಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ರೈತ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಇವರಿಗೆ ಸೇರಿದ ಸಾಸಲು ಗ್ರಾಮದ ಸರ್ವೆ ನಂ. 26/2 ರಲ್ಲಿ 0-30 ಗುಂಟೆ ಜಮೀನಿನ ಸರ್ವೆ ಕಾರ್ಯ ಮಾಡಿದ್ದು, ಜಮೀನಿನ 11 ಇ ನಕ್ಷೆ ಮಾಡಿಕೊಡಲು ಸರ್ವೆಯರ್ ಡಿ.ಬಿ ಗೌಡ ಅವರು 3,000/- ರೂ. ಲಂಚಕ್ಕೆ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಅವರಲ್ಲಿ ಬೇಡಿಕೆ ಒತ್ತಾಯಿಸಿ, 2013 ಡಿಸೆಂಬರ್ 01 ರಂದು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ತಂಡಕ್ಕೆ ಸಿಕ್ಕಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣ್ಯ ಪ್ರಕರಣದ ತನಿಖೆ ನಡೆಸಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಜೆ ದಯಾನಂದ, ಆರೋಪಿತರ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸನ್ನಿದಾನಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣವು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದೆ.

ಪ್ರಕರಣದ ಸಂಬಂಧ 2026 ಜನವರಿ 30 ರಂದು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಕುಮಾರ್ ರವರು ಅಂತಿಮ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಆರೋಪಿತರಾದ ದೇವನಹಳ್ಳಿಯ ಖಾಸಗಿ ಸರ್ವೇಯರ್ ಡಿ.ಬಿ. ಗೌಡ ವಿರುದ್ಧ ಆರೋಪ ಸಾಬೀತಾಗಿರುವುದರಿಂದ ಆರೋಪಿತರಿಗೆ ಭ್ರಷ್ಟಾಚಾರ ತಡೆ ಕಾಯ್ದೆ ಕಲಂ:07 ರಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000/- ರೂ. ದಂಡ ಮತ್ತು ಕಲಂ 13(1)(ಡಿ)ರ/ಜೋ13(2)ರಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ರೂ 15,000/- ರೂ ದಂಡ ವಿಧಿಸಿದ್ದಾರೆ.

ದಂಡ ಕಟ್ಟಲು ತಪ್ಪಿದ್ದಲ್ಲಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ. ಕೆ. ವಂಶಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…

1 hour ago

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

10 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

13 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

1 day ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

2 days ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

2 days ago