ಲೋಕಾಯುಕ್ತ ಪ್ರಕರಣ: ಸರ್ವೇಯರ್ ಗೆ ಜೈಲು ಶಿಕ್ಷೆ

2013 ರ ನವೆಂಬರ್ 29 ರಂದು ಜಮೀನು ಸರ್ವೇ ಕಾರ್ಯ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ರೈತನಿಂದ 3,000/- ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿತ ಸರ್ವೆಯರಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ರೈತ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಇವರಿಗೆ ಸೇರಿದ ಸಾಸಲು ಗ್ರಾಮದ ಸರ್ವೆ ನಂ. 26/2 ರಲ್ಲಿ 0-30 ಗುಂಟೆ ಜಮೀನಿನ ಸರ್ವೆ ಕಾರ್ಯ ಮಾಡಿದ್ದು, ಜಮೀನಿನ 11 ಇ ನಕ್ಷೆ ಮಾಡಿಕೊಡಲು ಸರ್ವೆಯರ್ ಡಿ.ಬಿ ಗೌಡ ಅವರು 3,000/- ರೂ. ಲಂಚಕ್ಕೆ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಅವರಲ್ಲಿ ಬೇಡಿಕೆ ಒತ್ತಾಯಿಸಿ, 2013 ಡಿಸೆಂಬರ್ 01 ರಂದು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ತಂಡಕ್ಕೆ ಸಿಕ್ಕಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣ್ಯ ಪ್ರಕರಣದ ತನಿಖೆ ನಡೆಸಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಜೆ ದಯಾನಂದ, ಆರೋಪಿತರ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸನ್ನಿದಾನಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣವು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದೆ.

ಪ್ರಕರಣದ ಸಂಬಂಧ 2026 ಜನವರಿ 30 ರಂದು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಕುಮಾರ್ ರವರು ಅಂತಿಮ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಆರೋಪಿತರಾದ ದೇವನಹಳ್ಳಿಯ ಖಾಸಗಿ ಸರ್ವೇಯರ್ ಡಿ.ಬಿ. ಗೌಡ ವಿರುದ್ಧ ಆರೋಪ ಸಾಬೀತಾಗಿರುವುದರಿಂದ ಆರೋಪಿತರಿಗೆ ಭ್ರಷ್ಟಾಚಾರ ತಡೆ ಕಾಯ್ದೆ ಕಲಂ:07 ರಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000/- ರೂ. ದಂಡ ಮತ್ತು ಕಲಂ 13(1)(ಡಿ)ರ/ಜೋ13(2)ರಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ರೂ 15,000/- ರೂ ದಂಡ ವಿಧಿಸಿದ್ದಾರೆ.

ದಂಡ ಕಟ್ಟಲು ತಪ್ಪಿದ್ದಲ್ಲಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ. ಕೆ. ವಂಶಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago