2013 ರ ನವೆಂಬರ್ 29 ರಂದು ಜಮೀನು ಸರ್ವೇ ಕಾರ್ಯ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ರೈತನಿಂದ 3,000/- ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿತ ಸರ್ವೆಯರಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ರೈತ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಇವರಿಗೆ ಸೇರಿದ ಸಾಸಲು ಗ್ರಾಮದ ಸರ್ವೆ ನಂ. 26/2 ರಲ್ಲಿ 0-30 ಗುಂಟೆ ಜಮೀನಿನ ಸರ್ವೆ ಕಾರ್ಯ ಮಾಡಿದ್ದು, ಜಮೀನಿನ 11 ಇ ನಕ್ಷೆ ಮಾಡಿಕೊಡಲು ಸರ್ವೆಯರ್ ಡಿ.ಬಿ ಗೌಡ ಅವರು 3,000/- ರೂ. ಲಂಚಕ್ಕೆ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಅವರಲ್ಲಿ ಬೇಡಿಕೆ ಒತ್ತಾಯಿಸಿ, 2013 ಡಿಸೆಂಬರ್ 01 ರಂದು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ತಂಡಕ್ಕೆ ಸಿಕ್ಕಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣ್ಯ ಪ್ರಕರಣದ ತನಿಖೆ ನಡೆಸಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಜೆ ದಯಾನಂದ, ಆರೋಪಿತರ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸನ್ನಿದಾನಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣವು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದೆ.
ಪ್ರಕರಣದ ಸಂಬಂಧ 2026 ಜನವರಿ 30 ರಂದು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಕುಮಾರ್ ರವರು ಅಂತಿಮ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಆರೋಪಿತರಾದ ದೇವನಹಳ್ಳಿಯ ಖಾಸಗಿ ಸರ್ವೇಯರ್ ಡಿ.ಬಿ. ಗೌಡ ವಿರುದ್ಧ ಆರೋಪ ಸಾಬೀತಾಗಿರುವುದರಿಂದ ಆರೋಪಿತರಿಗೆ ಭ್ರಷ್ಟಾಚಾರ ತಡೆ ಕಾಯ್ದೆ ಕಲಂ:07 ರಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000/- ರೂ. ದಂಡ ಮತ್ತು ಕಲಂ 13(1)(ಡಿ)ರ/ಜೋ13(2)ರಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ರೂ 15,000/- ರೂ ದಂಡ ವಿಧಿಸಿದ್ದಾರೆ.
ದಂಡ ಕಟ್ಟಲು ತಪ್ಪಿದ್ದಲ್ಲಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ. ಕೆ. ವಂಶಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…