2013 ರ ನವೆಂಬರ್ 29 ರಂದು ಜಮೀನು ಸರ್ವೇ ಕಾರ್ಯ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ರೈತನಿಂದ 3,000/- ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿತ ಸರ್ವೆಯರಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ರೈತ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಇವರಿಗೆ ಸೇರಿದ ಸಾಸಲು ಗ್ರಾಮದ ಸರ್ವೆ ನಂ. 26/2 ರಲ್ಲಿ 0-30 ಗುಂಟೆ ಜಮೀನಿನ ಸರ್ವೆ ಕಾರ್ಯ ಮಾಡಿದ್ದು, ಜಮೀನಿನ 11 ಇ ನಕ್ಷೆ ಮಾಡಿಕೊಡಲು ಸರ್ವೆಯರ್ ಡಿ.ಬಿ ಗೌಡ ಅವರು 3,000/- ರೂ. ಲಂಚಕ್ಕೆ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಅವರಲ್ಲಿ ಬೇಡಿಕೆ ಒತ್ತಾಯಿಸಿ, 2013 ಡಿಸೆಂಬರ್ 01 ರಂದು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ತಂಡಕ್ಕೆ ಸಿಕ್ಕಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣ್ಯ ಪ್ರಕರಣದ ತನಿಖೆ ನಡೆಸಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಜೆ ದಯಾನಂದ, ಆರೋಪಿತರ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸನ್ನಿದಾನಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣವು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದೆ.
ಪ್ರಕರಣದ ಸಂಬಂಧ 2026 ಜನವರಿ 30 ರಂದು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಕುಮಾರ್ ರವರು ಅಂತಿಮ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಆರೋಪಿತರಾದ ದೇವನಹಳ್ಳಿಯ ಖಾಸಗಿ ಸರ್ವೇಯರ್ ಡಿ.ಬಿ. ಗೌಡ ವಿರುದ್ಧ ಆರೋಪ ಸಾಬೀತಾಗಿರುವುದರಿಂದ ಆರೋಪಿತರಿಗೆ ಭ್ರಷ್ಟಾಚಾರ ತಡೆ ಕಾಯ್ದೆ ಕಲಂ:07 ರಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000/- ರೂ. ದಂಡ ಮತ್ತು ಕಲಂ 13(1)(ಡಿ)ರ/ಜೋ13(2)ರಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ರೂ 15,000/- ರೂ ದಂಡ ವಿಧಿಸಿದ್ದಾರೆ.
ದಂಡ ಕಟ್ಟಲು ತಪ್ಪಿದ್ದಲ್ಲಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ. ಕೆ. ವಂಶಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…