Categories: ಕೋಲಾರ

ಲೋಡ್ ಶೆಡ್ಡಿಂಗ್ ಸಮಸ್ಯೆ ವಿರುದ್ಧ ರೈತ ಸಂಘದಿಂದ ಏ‌.7ಕ್ಕೆ ಮಾಲೂರು ಶಾಸಕ ಮನೆ ಮುಂದೆ ಪ್ರತಿಭಟನೆ

ಕೋಲಾರ: ಏರಿಕೆಯಾಗಿರುವ.ವಿದ್ಯುತ್ತಿನ ಬೆಲೆ ಕಡಿಮೆ ಮಾಡಿ ಲೋಡ್ ಶೆಡ್ಡಿಂಗ್ ಹೆಸರಿನಲ್ಲಿ ಸಮರ್ಪಕವಾದ ವಿದ್ಯುತ್ ನೀಡದೆ ರೈತರ ಜೀವನ ಹಾಗೂ ಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಗುಣಮಟ್ಟದ 10 ತಾಸು ವಿದ್ಯುತ್ ನೀಡಬೇಕೆಂದು ರೈತಸಂಘದಿಂದ ಬೆಳೆ ಸಮೇತ ಏ.7 ರಂದು ಸೋಮವಾರ ಮಾಲೂರು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲು ನಗರದ ಹೊರವಲಯದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು

ಪ್ರಕೃತಿ ವಿಕೋಪ, ನಕಲಿ ಬಿತ್ತನೆ ಬೀಜ, ರೋಗಗಳ ಹಾವಳಿಯಿಂದ ರೈತರು ಬೆಳೆದಂತಹ ಬೆಳೆಗಳಿಗೆ ಸೂಕ್ತವಾದ ಮಾರುಕಟ್ಟೆ ವ್ಯವಸ್ಥೆಯಿಲ್ಲದೆ ಕಣ್ಣ ಮುಂದೆಯೇ ಬೆಳೆ ನಾಶ ಒಂದು ಕಡೆಯಾದರೆ ಮತ್ತೊಂದು ಕಡೆ ಬೆಳೆ ಸಮೃದ್ಧವಾಗಿ ಮಾರುಕಟ್ಟೆಯಲ್ಲಿ ಉತ್ತಮ ಬೆಳೆಯಿದ್ದರೂ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ಧೋರಣೆಯಿಂದ ಕೈಗೆ ಬಂದ ಬೆಳೆ ಕಣ್ಣ ಮುಂದೆಯೇ ಸಮರ್ಪಕವಾದ ನೀರು ಹಾಯಿಸದೆ ಒಣಗಿ ಹೋಗುವ ಜೊತೆಗೆ ಹಾಕಿದ ಬಂಡವಾಳ ಕೈಗೆ ಸಿಗದೆ ಸಾಲದ ಸುಳಿಗೆ ಸಿಲುಕಲು ಬೆಸ್ಕಾಂ ಅಧಿಕಾರಿಗಳೇ ನೇರ ಕಾರಣ ಎಂದು ಮಾಲೂರು ತಾಲ್ಲೂಕು ರೈತಸಂಘದ ತಾಲೂಕು ಅಧ್ಯಕ್ಷ ಪೆಮ್ಮದೊಡ್ಡಿ. ಯಲ್ಲಪ್ಪ ವಿದ್ಯುತ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪರೀಕ್ಷೆಯ ಸಮಯದಲ್ಲಿ ರಾತ್ರಿಯ ವೇಳೆ ವಿದ್ಯುತ್ ಕಡಿತ ಮಾಡಿ. ಮಕ್ಕಳ. ಭವಿಷ್ಯದ ಜೊತೆ ಚೆಲ್ಲಾಟ ಅಳುವ.ಬೆಸ್ಕಾಂ. ಅಧಿಕಾರಿಗಳ. ವಿರುದ್ದ ದ್ವನಿ ಇಲ್ದದ ಜನಪ್ರತಿನಿದಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಸಮರ್ಪಕವಾದ ವಿದ್ಯುತ್ ನೀಡದೆ ರೈತರ ಬೆಳೆ ನಾಶವಾದರೆ ಬೆಸ್ಕಾಂ ಅಧಿಕಾರಿಗಳ ಆಸ್ತಿ ಹರಾಜು ಹಾಕಿ ರೈತರ ಬೆಳೆ ಪರಿಹಾರ ನಷ್ಟ ತುಂಬಿಕೊಳ್ಳುವ ಕಾನೂನು ಜಾರಿಯಾಗಬೇಕೆಂದು ಸರ್ಕಾರಕ್ಕೆ ಆಗ್ರಹ ಮಾಡಿದರು.

ಬೇಸಿಗೆ ಆರಂಭಕ್ಕೂ ಮುನ್ನವೇ ಲೋಡ್ ಶೆಡ್ಡಿಂಗ್ ಹಾಗೂ ಕಲ್ಲಿದ್ದಲು ನೆಪದಲ್ಲಿ ಗ್ರಾಮೀಣ ಪ್ರದೇಶದ ರೈತರಿಗೆ ಕೊಡುವ ವಿದ್ಯುತ್ ಅಲ್ಲಿ ಮಾತ್ರ ವ್ಯತ್ಯಯವಾಗುತ್ತದೆ. ಕೈಗಾರಿಕೆಗಳಿಗೆ ಶ್ರೀಮಂತರ ಐಶಾರಾಮಿ ಜೀವನಕ್ಕೆ ವಿದ್ಯುತ್ ಕೊರತೆ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ರೈತ ಪುತ್ತೇರಿ ರಾಜು‌ ಮಾತನಾಡಿ, ಪ್ರತಿ ವರ್ಷ ಬೇಸಿಗೆಯಲ್ಲಿ ಸಮರ್ಪಕವಾದ ವಿದ್ಯುತ್ ನೀಡದೆ ರೈತರ ವಿದ್ಯುತ್ ಕಡಿತ ಮಾಡುವುದರಿಂದ ಬೆಸ್ಕಾಂ ಅಧಿಕಾರಿಗಳಿಗೆ ಸರ್ಕಾರ ಚಿನ್ನದ ಪದಕ ಕೊಡುತ್ತಾರೆಯೇ ರೈತರು ಬೆಳೆದ ಅನ್ನ ತಿಂದು ಅನ್ನದ ಋಣ ತೀರಿಸದೆ ರೈತ ವಿರೋಧಿ ಧೋರಣೆ ಬೆಸ್ಕಾಂ ಅಧಿಕಾರಿಗಳು ಅನುಸರಿಸುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದ 1 ಎಕರೆ ಬೆಳೆಗೆ ನೀರು ಹಾಯಿಸಬೇಕಾದರೆ ಕನಿಷ್ಠ ಪಕ್ಷ 3 ದಿನ ಕೊಳವೆಬಾವಿಗಳ ಹತ್ತಿರ ಠಿಕಾಣಿ ಹೂಡಿ ರಾತ್ರಿ ಹಗಲು ಶ್ರಮ ಪಡಬೇಕಾದ ಪರಿಸ್ಥಿತಿಯ ಜೊತೆಗೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದ ಬೆಳೆ ಒಂದೇ ದಿನದಲ್ಲಿ ಬೆಸ್ಕಾಂ ಅಧಿಕಾರಿಗಳ ರೈತ ವಿರೋಧಿ ನೀತಿಗೆ ನಾಶವಾಗುತ್ತಿದೆ. ಅಷ್ಟರ ಮಟ್ಟಿಗೆ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದರೂ ಸ್ಥಳೀಯ ಜನ ಪ್ರತಿನಿಧಿಗಳು ಚಕಾರವೆತ್ತುತ್ತಿಲ್ಲ ಎಂದು ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

24 ಗಂಟೆಯಲ್ಲಿ ಗುಣಮಟ್ಟದ 10 ತಾಸು ವಿದ್ಯುತ್ ನೀಡುವ ಜೊತೆಗೆ ಟಿಸಿ ಸುಟ್ಟರೆ ಲಂಚವಿಲ್ಲದೆ 12 ತಾಸುಗಳಲ್ಲಿ ಸರಿಪಡಿಸುವಂತೆ ಏಪ್ರಿಲ್ 7 ರಂದು ಸೋಮವಾರ ಜಾನುವಾರುಗಳು ಮತ್ತು ಬೆಳೆ ಸಮೇತ ಶಾಸಕರ ಮನೆ ಮುಂದೆ ಹೋರಾಟ ಮಾಡುವ ರೈತ ಸಂಘದ ಸಭೆಯಲ್ಲಿನ ತೀರ್ಮಾನ ಕೈಗೊಳ್ಳಲಾಯಿತು

ಸಭೆಯಲ್ಲಿನ. ರೈತಸಂಘದ ರಾಜ್ಯಉಪಾಧ್ಯಕ್ಷ ಕೆ.ನಾರಾಯಣಗೌಡ,ರಾಜ್ಯ ಮುಖಂಡ ಬಂಗಾವಾದಿ ನಾಗರಾಜ ಗೌಡ, ಸುಪ್ರೀಂಚಲ ಜಿಲ್ಲಾದ್ಯಕ್ಷ ಈಕಂಬಹಳ್ಳಿ ಮಂಜುನಾಥ, ತಿಮ್ಮಣ್ಣ, ಹರೀಶ..ರೊಪೇಶ. ಮಾ.ವೆ.ಪ್ರಕಾಶ.. ಮುಂತಾದವರಿದ್ದರು.

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago