Categories: ಕೋಲಾರ

ಲೋಡ್ ಶೆಡ್ಡಿಂಗ್ ಸಮಸ್ಯೆ ವಿರುದ್ಧ ರೈತ ಸಂಘದಿಂದ ಏ‌.7ಕ್ಕೆ ಮಾಲೂರು ಶಾಸಕ ಮನೆ ಮುಂದೆ ಪ್ರತಿಭಟನೆ

ಕೋಲಾರ: ಏರಿಕೆಯಾಗಿರುವ.ವಿದ್ಯುತ್ತಿನ ಬೆಲೆ ಕಡಿಮೆ ಮಾಡಿ ಲೋಡ್ ಶೆಡ್ಡಿಂಗ್ ಹೆಸರಿನಲ್ಲಿ ಸಮರ್ಪಕವಾದ ವಿದ್ಯುತ್ ನೀಡದೆ ರೈತರ ಜೀವನ ಹಾಗೂ ಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಗುಣಮಟ್ಟದ 10 ತಾಸು ವಿದ್ಯುತ್ ನೀಡಬೇಕೆಂದು ರೈತಸಂಘದಿಂದ ಬೆಳೆ ಸಮೇತ ಏ.7 ರಂದು ಸೋಮವಾರ ಮಾಲೂರು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲು ನಗರದ ಹೊರವಲಯದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು

ಪ್ರಕೃತಿ ವಿಕೋಪ, ನಕಲಿ ಬಿತ್ತನೆ ಬೀಜ, ರೋಗಗಳ ಹಾವಳಿಯಿಂದ ರೈತರು ಬೆಳೆದಂತಹ ಬೆಳೆಗಳಿಗೆ ಸೂಕ್ತವಾದ ಮಾರುಕಟ್ಟೆ ವ್ಯವಸ್ಥೆಯಿಲ್ಲದೆ ಕಣ್ಣ ಮುಂದೆಯೇ ಬೆಳೆ ನಾಶ ಒಂದು ಕಡೆಯಾದರೆ ಮತ್ತೊಂದು ಕಡೆ ಬೆಳೆ ಸಮೃದ್ಧವಾಗಿ ಮಾರುಕಟ್ಟೆಯಲ್ಲಿ ಉತ್ತಮ ಬೆಳೆಯಿದ್ದರೂ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ಧೋರಣೆಯಿಂದ ಕೈಗೆ ಬಂದ ಬೆಳೆ ಕಣ್ಣ ಮುಂದೆಯೇ ಸಮರ್ಪಕವಾದ ನೀರು ಹಾಯಿಸದೆ ಒಣಗಿ ಹೋಗುವ ಜೊತೆಗೆ ಹಾಕಿದ ಬಂಡವಾಳ ಕೈಗೆ ಸಿಗದೆ ಸಾಲದ ಸುಳಿಗೆ ಸಿಲುಕಲು ಬೆಸ್ಕಾಂ ಅಧಿಕಾರಿಗಳೇ ನೇರ ಕಾರಣ ಎಂದು ಮಾಲೂರು ತಾಲ್ಲೂಕು ರೈತಸಂಘದ ತಾಲೂಕು ಅಧ್ಯಕ್ಷ ಪೆಮ್ಮದೊಡ್ಡಿ. ಯಲ್ಲಪ್ಪ ವಿದ್ಯುತ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪರೀಕ್ಷೆಯ ಸಮಯದಲ್ಲಿ ರಾತ್ರಿಯ ವೇಳೆ ವಿದ್ಯುತ್ ಕಡಿತ ಮಾಡಿ. ಮಕ್ಕಳ. ಭವಿಷ್ಯದ ಜೊತೆ ಚೆಲ್ಲಾಟ ಅಳುವ.ಬೆಸ್ಕಾಂ. ಅಧಿಕಾರಿಗಳ. ವಿರುದ್ದ ದ್ವನಿ ಇಲ್ದದ ಜನಪ್ರತಿನಿದಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಸಮರ್ಪಕವಾದ ವಿದ್ಯುತ್ ನೀಡದೆ ರೈತರ ಬೆಳೆ ನಾಶವಾದರೆ ಬೆಸ್ಕಾಂ ಅಧಿಕಾರಿಗಳ ಆಸ್ತಿ ಹರಾಜು ಹಾಕಿ ರೈತರ ಬೆಳೆ ಪರಿಹಾರ ನಷ್ಟ ತುಂಬಿಕೊಳ್ಳುವ ಕಾನೂನು ಜಾರಿಯಾಗಬೇಕೆಂದು ಸರ್ಕಾರಕ್ಕೆ ಆಗ್ರಹ ಮಾಡಿದರು.

ಬೇಸಿಗೆ ಆರಂಭಕ್ಕೂ ಮುನ್ನವೇ ಲೋಡ್ ಶೆಡ್ಡಿಂಗ್ ಹಾಗೂ ಕಲ್ಲಿದ್ದಲು ನೆಪದಲ್ಲಿ ಗ್ರಾಮೀಣ ಪ್ರದೇಶದ ರೈತರಿಗೆ ಕೊಡುವ ವಿದ್ಯುತ್ ಅಲ್ಲಿ ಮಾತ್ರ ವ್ಯತ್ಯಯವಾಗುತ್ತದೆ. ಕೈಗಾರಿಕೆಗಳಿಗೆ ಶ್ರೀಮಂತರ ಐಶಾರಾಮಿ ಜೀವನಕ್ಕೆ ವಿದ್ಯುತ್ ಕೊರತೆ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ರೈತ ಪುತ್ತೇರಿ ರಾಜು‌ ಮಾತನಾಡಿ, ಪ್ರತಿ ವರ್ಷ ಬೇಸಿಗೆಯಲ್ಲಿ ಸಮರ್ಪಕವಾದ ವಿದ್ಯುತ್ ನೀಡದೆ ರೈತರ ವಿದ್ಯುತ್ ಕಡಿತ ಮಾಡುವುದರಿಂದ ಬೆಸ್ಕಾಂ ಅಧಿಕಾರಿಗಳಿಗೆ ಸರ್ಕಾರ ಚಿನ್ನದ ಪದಕ ಕೊಡುತ್ತಾರೆಯೇ ರೈತರು ಬೆಳೆದ ಅನ್ನ ತಿಂದು ಅನ್ನದ ಋಣ ತೀರಿಸದೆ ರೈತ ವಿರೋಧಿ ಧೋರಣೆ ಬೆಸ್ಕಾಂ ಅಧಿಕಾರಿಗಳು ಅನುಸರಿಸುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದ 1 ಎಕರೆ ಬೆಳೆಗೆ ನೀರು ಹಾಯಿಸಬೇಕಾದರೆ ಕನಿಷ್ಠ ಪಕ್ಷ 3 ದಿನ ಕೊಳವೆಬಾವಿಗಳ ಹತ್ತಿರ ಠಿಕಾಣಿ ಹೂಡಿ ರಾತ್ರಿ ಹಗಲು ಶ್ರಮ ಪಡಬೇಕಾದ ಪರಿಸ್ಥಿತಿಯ ಜೊತೆಗೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದ ಬೆಳೆ ಒಂದೇ ದಿನದಲ್ಲಿ ಬೆಸ್ಕಾಂ ಅಧಿಕಾರಿಗಳ ರೈತ ವಿರೋಧಿ ನೀತಿಗೆ ನಾಶವಾಗುತ್ತಿದೆ. ಅಷ್ಟರ ಮಟ್ಟಿಗೆ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದರೂ ಸ್ಥಳೀಯ ಜನ ಪ್ರತಿನಿಧಿಗಳು ಚಕಾರವೆತ್ತುತ್ತಿಲ್ಲ ಎಂದು ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

24 ಗಂಟೆಯಲ್ಲಿ ಗುಣಮಟ್ಟದ 10 ತಾಸು ವಿದ್ಯುತ್ ನೀಡುವ ಜೊತೆಗೆ ಟಿಸಿ ಸುಟ್ಟರೆ ಲಂಚವಿಲ್ಲದೆ 12 ತಾಸುಗಳಲ್ಲಿ ಸರಿಪಡಿಸುವಂತೆ ಏಪ್ರಿಲ್ 7 ರಂದು ಸೋಮವಾರ ಜಾನುವಾರುಗಳು ಮತ್ತು ಬೆಳೆ ಸಮೇತ ಶಾಸಕರ ಮನೆ ಮುಂದೆ ಹೋರಾಟ ಮಾಡುವ ರೈತ ಸಂಘದ ಸಭೆಯಲ್ಲಿನ ತೀರ್ಮಾನ ಕೈಗೊಳ್ಳಲಾಯಿತು

ಸಭೆಯಲ್ಲಿನ. ರೈತಸಂಘದ ರಾಜ್ಯಉಪಾಧ್ಯಕ್ಷ ಕೆ.ನಾರಾಯಣಗೌಡ,ರಾಜ್ಯ ಮುಖಂಡ ಬಂಗಾವಾದಿ ನಾಗರಾಜ ಗೌಡ, ಸುಪ್ರೀಂಚಲ ಜಿಲ್ಲಾದ್ಯಕ್ಷ ಈಕಂಬಹಳ್ಳಿ ಮಂಜುನಾಥ, ತಿಮ್ಮಣ್ಣ, ಹರೀಶ..ರೊಪೇಶ. ಮಾ.ವೆ.ಪ್ರಕಾಶ.. ಮುಂತಾದವರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago