ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ನಮ್ಮ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.

7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.

ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.

ಅದೇರೀತಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಕೂಡ ಚಾಲನೆ ನೀಡಿದರು.

ಇದೇ ವೇಳೆ ಅಮೃತ್‍ಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಆಗಿ ಚಾಲನೆ ನೀಡಲಾಯಿತು.

ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ.

ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್​ವರೆಗೆ ಸಂಚಾರ ಆರಂಭಿಸಿದ್ದಾರೆ.

ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿ 117 ಜನರು ಪ್ರಯಾಣ ನಡೆಸಿದ್ದಾರೆ.

ಮೋದಿಯವರೊಂದಿಗೆ ಎಂಟು ಜನ ಮಕ್ಕಳು, ಎಂಟು ಮಂದಿ ಮೆಟ್ರೋ ಉದ್ಯೋಗಿಗಳು, ಸರ್ಕಾರಿ ಪ್ರೌಢಶಾಲೆಯ ​16 ವಿದ್ಯಾರ್ಥಿಗಳು, ಆರ್.ವಿ ರೋಡ್ ಟು ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಮಾರ್ಗದಲ್ಲಿ ಕೆಲಸ ಮಾಡಿದ ಎಂಟು ಕಾರ್ಮಿಕರು ಮತ್ತು 8 ಜನಸಾಮಾನ್ಯರು ಸಂಚಾರ ನಡೆಸಿದ್ದಾರೆ.

ರಾಗಿಗುಡ್ಡದಿಂದ ಮೆಟ್ರೋ ರೈಲು ಸಂಚಾರ ಆರಂಭಗೊಂಡು ಜಯದೇವ ಮೆಟ್ರೋ ಸ್ಟೇಷನ್​ನಲ್ಲಿ ಐದು ನಿಮಿಷ ನಿಲ್ಲಿತು. ನಂತರ ಸಿಲ್ಕ್ ಬೋರ್ಡ್, ಹೊಂಗಸಂದ್ರ, ಸಿಂಗಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್​ನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಗಣ್ಯರು ರೈಲಿನಿಂದ ಇಳಿದರು.

ಹಳದಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ ಸಿಕ್ಕರೂ ಪ್ರಯಾಣಿಕರಿಗೆ ಸಂಚಾರಕ್ಕೆ ಅವಕಾಶವಿಲ್ಲ. ನಾಳೆ ಬೆಳಿಗ್ಗೆ ಐದು ಗಂಟೆಯಿಂದ ಪ್ರಯಾಣಿಕರು ಸಂಚಾರ ಮಾಡಬಹುದಾಗಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್‌ ಅಂದಾಜಿಸಲಾಗಿದೆ.

ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ.

ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್ ಡೆಕ್ಕರ್ (3.3) ನಿರ್ಮಿಸಲಾಗಿದೆ. ಡಬ್ಬಲ್ ಡೆಕ್ಕರ್ ಪ್ರೈಓವರ್‌ನ ಮೇಲ್ಬಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜೊತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು 5 ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.

ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ. ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್ ಬೇಸ್ ಟ್ರೈನ್ ಕಂಟ್ರೋಲ್) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಆರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago