ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಜಿ.ಎನ್. ವೇಣುಗೋಪಾಲ್, ಆತನ ಮಗ ವಿವೇಕ್ ಎಂಬುವವರು ವಕೀಲ ಸಂದೀಪ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕುರಿತು ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಕ್ಷಿದಾರರ ಜಮೀನಿನಲ್ಲಿ ಅತಿಕ್ರಮಣ ಮಾಡಿ, ವಿದ್ಯುತ್ ಕಂಬ ಹಾಕಿದ್ದರ ವಿಚಾರವಾಗಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಸಂಬಂಧ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಪರಿವೀಕ್ಷಣೆಗಾಗಿ ತೆರಳಿದ್ದ ವೇಳೆ ದಾಳಿ ನಡೆಸಲಾಗಿದೆ.
ಅವಾಚ್ಯ ಪದಗಳಿಂದ ನಿಂದನೆ, ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿದ್ದಾಗಿ 3-4 ಜನ ಸೇರಿ ವಕೀಲ ಸಂದೀಪ್ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ನಡೆಸಿದಲ್ಲದೇ ಕೋರ್ಟ್ ಆವರಣದಲ್ಲಿಯೇ ರೌಡಿಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.
ಪೊಲೀಸರು ಪರಿವೀಕ್ಷಣೆ ಮುಗಿಸಿ ಹೋದ ಕೇಲವೇ ಕ್ಷಣದಲ್ಲಿ ಎರಡು ಕಾರಿಗಳಲ್ಲಿ ಆಗಮಿಸಿದ ವೇಣುಗೋಪಾಲ್ ಹಾಗೂ ಆತನ ಮಗನಿಂದ ಸಂದೀಪ್ ಮೇಲೆ ಹಲ್ಲೆ ಮಾಡಲಾಗಿದೆ.
ಹಲ್ಲೆಗೊಳಗಾದ ವಕೀಲ ಸಂದೀಪ್ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಆತನ ಮಗ ವಿವೇಕ್ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅತಿಕ್ರಮ ಪ್ರವೇಶದ ದೂರು ಆಧಾರದಲ್ಲಿ ಪೊಲೀಸರ ಕರೆಯ ಮೇರೆಗೆ ಸ್ಥಳಕ್ಕೆ ಕಕ್ಷಿದಾರರೊಂದಿಗೆ ಸ್ಥಳ ಪರಿವೀಕ್ಷಣೆಗೆ ಭೇಟಿ ನೀಡಲಾಗಿತ್ತು. ಪರಿವೀಕ್ಷಣೆಗೆ ಬಂದಿದ್ದ ಹೋಯ್ಸಳ ಸಿಬ್ಬಂದಿ, ಅವರು ನಿರ್ಗಮಿಸುತ್ತಿದ್ದಂತೆ ವಕೀಲನ ಮೇಲೆ ದಾಳಿ ನಡೆಸಲಾಗಿದೆ ಎಂದು ಗಾಯಾಳು ಸಂದೀಪ್ ಆರೋಪಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…