ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಜಿ.ಎನ್. ವೇಣುಗೋಪಾಲ್, ಆತನ ಮಗ ವಿವೇಕ್ ಎಂಬುವವರು ವಕೀಲ ಸಂದೀಪ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕುರಿತು ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಕ್ಷಿದಾರರ ಜಮೀನಿನಲ್ಲಿ ಅತಿಕ್ರಮಣ ಮಾಡಿ, ವಿದ್ಯುತ್ ಕಂಬ ಹಾಕಿದ್ದರ ವಿಚಾರವಾಗಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಸಂಬಂಧ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಪರಿವೀಕ್ಷಣೆಗಾಗಿ ತೆರಳಿದ್ದ ವೇಳೆ ದಾಳಿ ನಡೆಸಲಾಗಿದೆ.
ಅವಾಚ್ಯ ಪದಗಳಿಂದ ನಿಂದನೆ, ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿದ್ದಾಗಿ 3-4 ಜನ ಸೇರಿ ವಕೀಲ ಸಂದೀಪ್ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ನಡೆಸಿದಲ್ಲದೇ ಕೋರ್ಟ್ ಆವರಣದಲ್ಲಿಯೇ ರೌಡಿಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.
ಪೊಲೀಸರು ಪರಿವೀಕ್ಷಣೆ ಮುಗಿಸಿ ಹೋದ ಕೇಲವೇ ಕ್ಷಣದಲ್ಲಿ ಎರಡು ಕಾರಿಗಳಲ್ಲಿ ಆಗಮಿಸಿದ ವೇಣುಗೋಪಾಲ್ ಹಾಗೂ ಆತನ ಮಗನಿಂದ ಸಂದೀಪ್ ಮೇಲೆ ಹಲ್ಲೆ ಮಾಡಲಾಗಿದೆ.
ಹಲ್ಲೆಗೊಳಗಾದ ವಕೀಲ ಸಂದೀಪ್ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಆತನ ಮಗ ವಿವೇಕ್ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅತಿಕ್ರಮ ಪ್ರವೇಶದ ದೂರು ಆಧಾರದಲ್ಲಿ ಪೊಲೀಸರ ಕರೆಯ ಮೇರೆಗೆ ಸ್ಥಳಕ್ಕೆ ಕಕ್ಷಿದಾರರೊಂದಿಗೆ ಸ್ಥಳ ಪರಿವೀಕ್ಷಣೆಗೆ ಭೇಟಿ ನೀಡಲಾಗಿತ್ತು. ಪರಿವೀಕ್ಷಣೆಗೆ ಬಂದಿದ್ದ ಹೋಯ್ಸಳ ಸಿಬ್ಬಂದಿ, ಅವರು ನಿರ್ಗಮಿಸುತ್ತಿದ್ದಂತೆ ವಕೀಲನ ಮೇಲೆ ದಾಳಿ ನಡೆಸಲಾಗಿದೆ ಎಂದು ಗಾಯಾಳು ಸಂದೀಪ್ ಆರೋಪಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…