ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಜಿ.ಎನ್. ವೇಣುಗೋಪಾಲ್, ಆತನ ಮಗ ವಿವೇಕ್ ಎಂಬುವವರು ವಕೀಲ ಸಂದೀಪ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕುರಿತು ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಕ್ಷಿದಾರರ ಜಮೀನಿನಲ್ಲಿ ಅತಿಕ್ರಮಣ ಮಾಡಿ, ವಿದ್ಯುತ್ ಕಂಬ ಹಾಕಿದ್ದರ ವಿಚಾರವಾಗಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಸಂಬಂಧ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಪರಿವೀಕ್ಷಣೆಗಾಗಿ ತೆರಳಿದ್ದ ವೇಳೆ ದಾಳಿ ನಡೆಸಲಾಗಿದೆ.
ಅವಾಚ್ಯ ಪದಗಳಿಂದ ನಿಂದನೆ, ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿದ್ದಾಗಿ 3-4 ಜನ ಸೇರಿ ವಕೀಲ ಸಂದೀಪ್ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ನಡೆಸಿದಲ್ಲದೇ ಕೋರ್ಟ್ ಆವರಣದಲ್ಲಿಯೇ ರೌಡಿಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.
ಪೊಲೀಸರು ಪರಿವೀಕ್ಷಣೆ ಮುಗಿಸಿ ಹೋದ ಕೇಲವೇ ಕ್ಷಣದಲ್ಲಿ ಎರಡು ಕಾರಿಗಳಲ್ಲಿ ಆಗಮಿಸಿದ ವೇಣುಗೋಪಾಲ್ ಹಾಗೂ ಆತನ ಮಗನಿಂದ ಸಂದೀಪ್ ಮೇಲೆ ಹಲ್ಲೆ ಮಾಡಲಾಗಿದೆ.
ಹಲ್ಲೆಗೊಳಗಾದ ವಕೀಲ ಸಂದೀಪ್ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಆತನ ಮಗ ವಿವೇಕ್ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅತಿಕ್ರಮ ಪ್ರವೇಶದ ದೂರು ಆಧಾರದಲ್ಲಿ ಪೊಲೀಸರ ಕರೆಯ ಮೇರೆಗೆ ಸ್ಥಳಕ್ಕೆ ಕಕ್ಷಿದಾರರೊಂದಿಗೆ ಸ್ಥಳ ಪರಿವೀಕ್ಷಣೆಗೆ ಭೇಟಿ ನೀಡಲಾಗಿತ್ತು. ಪರಿವೀಕ್ಷಣೆಗೆ ಬಂದಿದ್ದ ಹೋಯ್ಸಳ ಸಿಬ್ಬಂದಿ, ಅವರು ನಿರ್ಗಮಿಸುತ್ತಿದ್ದಂತೆ ವಕೀಲನ ಮೇಲೆ ದಾಳಿ ನಡೆಸಲಾಗಿದೆ ಎಂದು ಗಾಯಾಳು ಸಂದೀಪ್ ಆರೋಪಿಸಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…