ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಜಿ.ಎನ್. ವೇಣುಗೋಪಾಲ್, ಆತನ ಮಗ ವಿವೇಕ್ ಎಂಬುವವರು ವಕೀಲ ಸಂದೀಪ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕುರಿತು ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಕ್ಷಿದಾರರ ಜಮೀನಿನಲ್ಲಿ ಅತಿಕ್ರಮಣ ಮಾಡಿ, ವಿದ್ಯುತ್ ಕಂಬ ಹಾಕಿದ್ದರ ವಿಚಾರವಾಗಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಸಂಬಂಧ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಪರಿವೀಕ್ಷಣೆಗಾಗಿ ತೆರಳಿದ್ದ ವೇಳೆ ದಾಳಿ ನಡೆಸಲಾಗಿದೆ.
ಅವಾಚ್ಯ ಪದಗಳಿಂದ ನಿಂದನೆ, ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿದ್ದಾಗಿ 3-4 ಜನ ಸೇರಿ ವಕೀಲ ಸಂದೀಪ್ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ನಡೆಸಿದಲ್ಲದೇ ಕೋರ್ಟ್ ಆವರಣದಲ್ಲಿಯೇ ರೌಡಿಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.
ಪೊಲೀಸರು ಪರಿವೀಕ್ಷಣೆ ಮುಗಿಸಿ ಹೋದ ಕೇಲವೇ ಕ್ಷಣದಲ್ಲಿ ಎರಡು ಕಾರಿಗಳಲ್ಲಿ ಆಗಮಿಸಿದ ವೇಣುಗೋಪಾಲ್ ಹಾಗೂ ಆತನ ಮಗನಿಂದ ಸಂದೀಪ್ ಮೇಲೆ ಹಲ್ಲೆ ಮಾಡಲಾಗಿದೆ.
ಹಲ್ಲೆಗೊಳಗಾದ ವಕೀಲ ಸಂದೀಪ್ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಆತನ ಮಗ ವಿವೇಕ್ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅತಿಕ್ರಮ ಪ್ರವೇಶದ ದೂರು ಆಧಾರದಲ್ಲಿ ಪೊಲೀಸರ ಕರೆಯ ಮೇರೆಗೆ ಸ್ಥಳಕ್ಕೆ ಕಕ್ಷಿದಾರರೊಂದಿಗೆ ಸ್ಥಳ ಪರಿವೀಕ್ಷಣೆಗೆ ಭೇಟಿ ನೀಡಲಾಗಿತ್ತು. ಪರಿವೀಕ್ಷಣೆಗೆ ಬಂದಿದ್ದ ಹೋಯ್ಸಳ ಸಿಬ್ಬಂದಿ, ಅವರು ನಿರ್ಗಮಿಸುತ್ತಿದ್ದಂತೆ ವಕೀಲನ ಮೇಲೆ ದಾಳಿ ನಡೆಸಲಾಗಿದೆ ಎಂದು ಗಾಯಾಳು ಸಂದೀಪ್ ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…