ವಕೀಲನ ಮೇಲೆ ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಹಲ್ಲೆ

ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಜಿ.ಎನ್. ವೇಣುಗೋಪಾಲ್, ಆತನ ಮಗ ವಿವೇಕ್ ಎಂಬುವವರು ವಕೀಲ ಸಂದೀಪ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕುರಿತು ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಕ್ಷಿದಾರರ ಜಮೀನಿನಲ್ಲಿ ಅತಿಕ್ರಮಣ ಮಾಡಿ, ವಿದ್ಯುತ್ ಕಂಬ ಹಾಕಿದ್ದರ ವಿಚಾರವಾಗಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಸಂಬಂಧ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಪರಿವೀಕ್ಷಣೆಗಾಗಿ ತೆರಳಿದ್ದ ವೇಳೆ ದಾಳಿ ನಡೆಸಲಾಗಿದೆ.

ಅವಾಚ್ಯ ಪದಗಳಿಂದ ನಿಂದನೆ, ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿದ್ದಾಗಿ 3-4 ಜನ ಸೇರಿ ವಕೀಲ ಸಂದೀಪ್ ಮೇಲೆ ದಾಳಿ ನಡೆಸಲಾಗಿದೆ‌.

ದಾಳಿ ನಡೆಸಿದಲ್ಲದೇ ಕೋರ್ಟ್ ಆವರಣದಲ್ಲಿಯೇ ರೌಡಿಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

ಪೊಲೀಸರು ಪರಿವೀಕ್ಷಣೆ ಮುಗಿಸಿ ಹೋದ ಕೇಲವೇ ಕ್ಷಣದಲ್ಲಿ ಎರಡು ಕಾರಿಗಳಲ್ಲಿ ಆಗಮಿಸಿದ ವೇಣುಗೋಪಾಲ್ ಹಾಗೂ ಆತನ ಮಗನಿಂದ ಸಂದೀಪ್ ಮೇಲೆ ಹಲ್ಲೆ ಮಾಡಲಾಗಿದೆ.

ಹಲ್ಲೆಗೊಳಗಾದ ವಕೀಲ ಸಂದೀಪ್ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ‌.

ದೂರು ದಾಖಲಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಆತನ ಮಗ ವಿವೇಕ್ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅತಿಕ್ರಮ ಪ್ರವೇಶದ ದೂರು ಆಧಾರದಲ್ಲಿ ಪೊಲೀಸರ ಕರೆಯ ಮೇರೆಗೆ ಸ್ಥಳಕ್ಕೆ ಕಕ್ಷಿದಾರರೊಂದಿಗೆ ಸ್ಥಳ ಪರಿವೀಕ್ಷಣೆಗೆ ಭೇಟಿ ನೀಡಲಾಗಿತ್ತು. ಪರಿವೀಕ್ಷಣೆಗೆ ಬಂದಿದ್ದ ಹೋಯ್ಸಳ ಸಿಬ್ಬಂದಿ, ಅವರು ನಿರ್ಗಮಿಸುತ್ತಿದ್ದಂತೆ ವಕೀಲನ ಮೇಲೆ ದಾಳಿ ನಡೆಸಲಾಗಿದೆ ಎಂದು ಗಾಯಾಳು ಸಂದೀಪ್ ಆರೋಪಿಸಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

8 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

18 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

19 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago