ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ, ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್ ಹೇಳಿಕೆ

ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.

ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆ‌ರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಕೀಲರ ಸಂಘಕ್ಕೆ ಕಟ್ಟಡವಿಲ್ಲ. ಶೀಘ್ರವಾಗಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತ್ಯೇಕ ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಬೇಡಿಕೆಗಳನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ವತಿಯಿಂದ ಉಪಾಧ್ಯಕ್ಷ ಗಿರೀಶ್ ಕುಮಾರ್ ಅವರ ಮುಂದಿಡಲಾಯಿತು.

ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು‌ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

27 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago