ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.
ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.
ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…