ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.
ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.
ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…