ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ, ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್ ಹೇಳಿಕೆ

ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.

ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆ‌ರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಕೀಲರ ಸಂಘಕ್ಕೆ ಕಟ್ಟಡವಿಲ್ಲ. ಶೀಘ್ರವಾಗಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತ್ಯೇಕ ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಬೇಡಿಕೆಗಳನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ವತಿಯಿಂದ ಉಪಾಧ್ಯಕ್ಷ ಗಿರೀಶ್ ಕುಮಾರ್ ಅವರ ಮುಂದಿಡಲಾಯಿತು.

ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು‌ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

7 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

19 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

23 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago