ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ, ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್ ಹೇಳಿಕೆ

ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.

ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆ‌ರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಕೀಲರ ಸಂಘಕ್ಕೆ ಕಟ್ಟಡವಿಲ್ಲ. ಶೀಘ್ರವಾಗಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತ್ಯೇಕ ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಬೇಡಿಕೆಗಳನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ವತಿಯಿಂದ ಉಪಾಧ್ಯಕ್ಷ ಗಿರೀಶ್ ಕುಮಾರ್ ಅವರ ಮುಂದಿಡಲಾಯಿತು.

ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು‌ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago