Categories: ಕೋಲಾರ

ವಕ್ಕಲೇರಿಗೆ ಸಮುದಾಯ ಆರೋಗ್ಯ ಕೇಂದ್ರ, ಮೈಲಾಂಡಹಳ್ಳಿಗೆ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಿ ಮೈಲಾಂಡಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳಿಗೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ಮನವಿ ಮಾಡಿದ ಅವರು ವಕ್ಕಲೇರಿ ಹೋಬಳಿ ಕೇಂದ್ರವಾಗಿದ್ದು, ಸುಮಾರು 40 ಗ್ರಾಮಗಳಿಗೆ ಮುಖ್ಯ ಸಂಪರ್ಕ ಕೊಂಡಿಯಾಗಿದೆ ಸದರಿ ಗ್ರಾಮದಲ್ಲಿ ವಿದ್ಯುತ್ ಸಬ್ ಸ್ಟೇಷನ್, ನಾಡಕಛೇರಿ, ಬ್ಯಾಂಕ್ ಹಾಗೂ 10 ಕ್ಕಿಂತಲೂ ಹೆಚ್ಚು ಶಾಲೆಗಳು ಸೇರಿದಂತೆ ಹಾಗೂ ನವೋದಯ ಕೇಂದ್ರೀಯ ಶಾಲೆ ಇದ್ದು ಗ್ರಾಮದಲ್ಲಿ ಸರಿಸುಮಾರು 6 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಇದ್ದು, ತುರ್ತು ಚಿಕಿತ್ಸೆಗಾಗಿ ಕೋಲಾರಕ್ಕೆ ಹೋಗಬೇಕಾಗಿರುತ್ತದೆ ಸಾರ್ವಜನಿಕ ಹಿತದೃಷ್ಟಿಯಿಂದ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿ ಕಟ್ಟಡವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು

ಮೈಲಾಂಡಹಳ್ಳಿ ಗ್ರಾಮವು ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತುಂಬಾ ದೂರವಿದೆ ಗ್ರಾಮದಲ್ಲಿ 1200 ಜನಸಂಖ್ಯೆ ಇದ್ದು, ಅದರಲ್ಲಿ ಹಿರಿಯ ನಾಗರೀಕರಿಗೆ, ಗರ್ಭಿಣಿ ಸ್ತ್ರೀಯರಿಗೆ, ಅಂಗವಿಕಲರಿಗೆ ಹಾಗೂ ಮಕ್ಕಳಿಗೆ ಆರೋಗ್ಯದ ದೃಷ್ಟಿಯಿಂದ ಬಹಳ ಅನಾನುಕೂಲವಾಗುತ್ತಿದ್ದು, ಮೈಲಾಂಡಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಾಣ ಮಾಡುವುದರಿಂದ ಸುತ್ತಮುತ್ತಲಿನ ಗ್ರಾಮಗಳಾದ ತಿರುಮಲಕೊಪ್ಪ, ಗಂಗಾಪುರ, ಲಕ್ಷ್ಮೀಪುರ, ಮಲ್ಲೇಶ್ವರನಗರ, ಕೂತಾಂಡಹಳ್ಳಿ ಮುಂತಾದ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು

ಈ ಸಂಭಂದಿಸಿದಂ ಈಗಾಗಲೇ 2 ಬಾರಿ ಮನವಿ ಸಲ್ಲಿಸಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಸಹ ಆರೋಗ್ಯ ಉಪಕೇಂದ್ರ ಮಂಜೂರು ಮಾಡಲು ಶಿಫಾರಸ್ಸು ಮಾಡಿದ್ದಾರೆ ಕೂಡಲೇ ಮೈಲಾಂಡಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ವಕ್ಕಲೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ. ಮೈಲಾಂಡಹಳ್ಳಿ ಮುರಳಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago