Categories: ಕೋಲಾರ

ವಕ್ಕಲೇರಿಗೆ ಸಮುದಾಯ ಆರೋಗ್ಯ ಕೇಂದ್ರ, ಮೈಲಾಂಡಹಳ್ಳಿಗೆ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಿ ಮೈಲಾಂಡಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳಿಗೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ಮನವಿ ಮಾಡಿದ ಅವರು ವಕ್ಕಲೇರಿ ಹೋಬಳಿ ಕೇಂದ್ರವಾಗಿದ್ದು, ಸುಮಾರು 40 ಗ್ರಾಮಗಳಿಗೆ ಮುಖ್ಯ ಸಂಪರ್ಕ ಕೊಂಡಿಯಾಗಿದೆ ಸದರಿ ಗ್ರಾಮದಲ್ಲಿ ವಿದ್ಯುತ್ ಸಬ್ ಸ್ಟೇಷನ್, ನಾಡಕಛೇರಿ, ಬ್ಯಾಂಕ್ ಹಾಗೂ 10 ಕ್ಕಿಂತಲೂ ಹೆಚ್ಚು ಶಾಲೆಗಳು ಸೇರಿದಂತೆ ಹಾಗೂ ನವೋದಯ ಕೇಂದ್ರೀಯ ಶಾಲೆ ಇದ್ದು ಗ್ರಾಮದಲ್ಲಿ ಸರಿಸುಮಾರು 6 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಇದ್ದು, ತುರ್ತು ಚಿಕಿತ್ಸೆಗಾಗಿ ಕೋಲಾರಕ್ಕೆ ಹೋಗಬೇಕಾಗಿರುತ್ತದೆ ಸಾರ್ವಜನಿಕ ಹಿತದೃಷ್ಟಿಯಿಂದ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿ ಕಟ್ಟಡವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು

ಮೈಲಾಂಡಹಳ್ಳಿ ಗ್ರಾಮವು ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತುಂಬಾ ದೂರವಿದೆ ಗ್ರಾಮದಲ್ಲಿ 1200 ಜನಸಂಖ್ಯೆ ಇದ್ದು, ಅದರಲ್ಲಿ ಹಿರಿಯ ನಾಗರೀಕರಿಗೆ, ಗರ್ಭಿಣಿ ಸ್ತ್ರೀಯರಿಗೆ, ಅಂಗವಿಕಲರಿಗೆ ಹಾಗೂ ಮಕ್ಕಳಿಗೆ ಆರೋಗ್ಯದ ದೃಷ್ಟಿಯಿಂದ ಬಹಳ ಅನಾನುಕೂಲವಾಗುತ್ತಿದ್ದು, ಮೈಲಾಂಡಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಾಣ ಮಾಡುವುದರಿಂದ ಸುತ್ತಮುತ್ತಲಿನ ಗ್ರಾಮಗಳಾದ ತಿರುಮಲಕೊಪ್ಪ, ಗಂಗಾಪುರ, ಲಕ್ಷ್ಮೀಪುರ, ಮಲ್ಲೇಶ್ವರನಗರ, ಕೂತಾಂಡಹಳ್ಳಿ ಮುಂತಾದ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು

ಈ ಸಂಭಂದಿಸಿದಂ ಈಗಾಗಲೇ 2 ಬಾರಿ ಮನವಿ ಸಲ್ಲಿಸಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಸಹ ಆರೋಗ್ಯ ಉಪಕೇಂದ್ರ ಮಂಜೂರು ಮಾಡಲು ಶಿಫಾರಸ್ಸು ಮಾಡಿದ್ದಾರೆ ಕೂಡಲೇ ಮೈಲಾಂಡಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ವಕ್ಕಲೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ. ಮೈಲಾಂಡಹಳ್ಳಿ ಮುರಳಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago