Categories: ಕೋಲಾರ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,

ಕಾರ್ಯಕ್ರಮವನ್ನು  ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಒಂದಾಗಿದೆ ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ ಮಾತನಾಡಿ ದೇಶ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆಯಾಗಿದ್ದಾರೆ ಅವರು ಇಲ್ಲದೇ ಹೋದರೆ ನಮ್ಮ ರಕ್ಷಣೆ ಅಸಾಧ್ಯವಾಗುತ್ತದೆ ದೇಶ ಭಕ್ತಿ ಎಂಬುದು ನಮ್ಮಲ್ಲಿ ತಾನಾಗಿಯೇ ಬರಬೇಕು ನಿಮ್ಮಲ್ಲಿ ಇರುವವರು ಕೂಡ ನಾನು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂಬ ಛಲ ನಿಮ್ಮಲ್ಲಿ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೈನಿಕರಾದ ಶೆಟ್ಟಿಗಾನಹಳ್ಳಿ ಮುನಿಯಪ್ಪ, ದೊಡ್ಡ ಅಯ್ಯೂರು ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ನಾರಾಯಣಪ್ಪ, ಗೌಡರ ವೆಂಕಟಪ್ಪ, ಗೋವಿಂದಪ್ಪ, ಕನ್ವೀನರ್ ರಾಜಣ್ಣ, ಪೂಜಾರಿ ರಘು, ಭಗತ್ ಸಿಂಗ್ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಉಪಾಧ್ಯಕ್ಷ ಮಾರ್ಕೊಂಡಯ್ಯ, ಸಮಿತಿ ಸದಸ್ಯರಾದ ರವಿಕುಮಾರ್, ನವೀನ್, ನೃತ್ಯ ನಿರ್ದೇಶಕ ಶ್ರವಣ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಧ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು ಕಾರ್ಯಕ್ರಮವನ್ನು ದೊಮ್ಮಸಂದ್ರ ನರಸಿಂಹ ನಿರೂಪಣೆ ಮಾಡಿದರು.

Ramesh Babu

Journalist

Recent Posts

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ಮಿತ್ರತ್ವ ಅಥವಾ ಸಹಜತೆಗೆ ದ್ರೋಹ....... ಒಂದು ಸಲಹೆ ಮತ್ತು ಮನವಿ..... ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ…

6 hours ago

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

1 day ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

2 days ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

2 days ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

2 days ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 days ago