Categories: ಕೋಲಾರ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,

ಕಾರ್ಯಕ್ರಮವನ್ನು  ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಒಂದಾಗಿದೆ ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ ಮಾತನಾಡಿ ದೇಶ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆಯಾಗಿದ್ದಾರೆ ಅವರು ಇಲ್ಲದೇ ಹೋದರೆ ನಮ್ಮ ರಕ್ಷಣೆ ಅಸಾಧ್ಯವಾಗುತ್ತದೆ ದೇಶ ಭಕ್ತಿ ಎಂಬುದು ನಮ್ಮಲ್ಲಿ ತಾನಾಗಿಯೇ ಬರಬೇಕು ನಿಮ್ಮಲ್ಲಿ ಇರುವವರು ಕೂಡ ನಾನು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂಬ ಛಲ ನಿಮ್ಮಲ್ಲಿ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೈನಿಕರಾದ ಶೆಟ್ಟಿಗಾನಹಳ್ಳಿ ಮುನಿಯಪ್ಪ, ದೊಡ್ಡ ಅಯ್ಯೂರು ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ನಾರಾಯಣಪ್ಪ, ಗೌಡರ ವೆಂಕಟಪ್ಪ, ಗೋವಿಂದಪ್ಪ, ಕನ್ವೀನರ್ ರಾಜಣ್ಣ, ಪೂಜಾರಿ ರಘು, ಭಗತ್ ಸಿಂಗ್ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಉಪಾಧ್ಯಕ್ಷ ಮಾರ್ಕೊಂಡಯ್ಯ, ಸಮಿತಿ ಸದಸ್ಯರಾದ ರವಿಕುಮಾರ್, ನವೀನ್, ನೃತ್ಯ ನಿರ್ದೇಶಕ ಶ್ರವಣ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಧ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು ಕಾರ್ಯಕ್ರಮವನ್ನು ದೊಮ್ಮಸಂದ್ರ ನರಸಿಂಹ ನಿರೂಪಣೆ ಮಾಡಿದರು.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

3 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

18 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

24 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago