Categories: ಕೋಲಾರ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,

ಕಾರ್ಯಕ್ರಮವನ್ನು  ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಒಂದಾಗಿದೆ ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ ಮಾತನಾಡಿ ದೇಶ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆಯಾಗಿದ್ದಾರೆ ಅವರು ಇಲ್ಲದೇ ಹೋದರೆ ನಮ್ಮ ರಕ್ಷಣೆ ಅಸಾಧ್ಯವಾಗುತ್ತದೆ ದೇಶ ಭಕ್ತಿ ಎಂಬುದು ನಮ್ಮಲ್ಲಿ ತಾನಾಗಿಯೇ ಬರಬೇಕು ನಿಮ್ಮಲ್ಲಿ ಇರುವವರು ಕೂಡ ನಾನು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂಬ ಛಲ ನಿಮ್ಮಲ್ಲಿ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೈನಿಕರಾದ ಶೆಟ್ಟಿಗಾನಹಳ್ಳಿ ಮುನಿಯಪ್ಪ, ದೊಡ್ಡ ಅಯ್ಯೂರು ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ನಾರಾಯಣಪ್ಪ, ಗೌಡರ ವೆಂಕಟಪ್ಪ, ಗೋವಿಂದಪ್ಪ, ಕನ್ವೀನರ್ ರಾಜಣ್ಣ, ಪೂಜಾರಿ ರಘು, ಭಗತ್ ಸಿಂಗ್ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಉಪಾಧ್ಯಕ್ಷ ಮಾರ್ಕೊಂಡಯ್ಯ, ಸಮಿತಿ ಸದಸ್ಯರಾದ ರವಿಕುಮಾರ್, ನವೀನ್, ನೃತ್ಯ ನಿರ್ದೇಶಕ ಶ್ರವಣ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಧ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು ಕಾರ್ಯಕ್ರಮವನ್ನು ದೊಮ್ಮಸಂದ್ರ ನರಸಿಂಹ ನಿರೂಪಣೆ ಮಾಡಿದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

9 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

19 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago