ಕೋಲಾರ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ವತಿಯಿಂದ ಬಡವರಿಗೆ ಅನುಕೂಲವಾಗುವಂತೆ ಎಲ್ಲಾ ತರಹದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಪಾಲಾಕ್ಷಗೌಡ ತಿಳಿಸಿದರು
ತಾಲೂಕಿನ ವಕ್ಕಲೇರಿ ಗ್ರಾಮದ ಸೊಸೈಟಿ ಆವರಣದಲ್ಲಿ ಸೋಮವಾರ ಜನ ಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀಮಂತರು ಬ್ರ್ಯಾಂಡೆಡ್ ಔಷಧಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಾರೆ ಅದೇ ಗುಣಮಟ್ಟದ ಔಷಧಗಳು ಈ ಕೇಂದ್ರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಲಭ್ಯವಿದ್ದು ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕೊರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬುದು ಈ ಕೇಂದ್ರದ ಉದ್ದೇಶವಾಗಿದ್ದು ಬಡವರು ಹೆಚ್ಚಿನ ಅನುಕೂಲ ಪಡೆಯುವಂತಾಗಬೇಕು ಎಂದರು.
ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಇಡೀ ದೇಶದ ಯಾದ್ಯಂತ ಜನ ಔಷಧಿ ಕೇಂದ್ರಗಳನ್ನು ಸ್ಧಾಪಿಸಿದೆ ಶ್ರೇಷ್ಠ ಗುಣಮಟ್ಟದ ಔಷಧಿಗಳನ್ನು ಕಡಿಮೆ ಬೆಲೆಗೆ ಜನರಿಗೆ ಒದಗಿಸಲಾಗುತ್ತಾ ಇದ್ದು ಕೇಂದ್ರದಿಂದ ಯಾವುದೇ ಲಾಭದ ಆಕಾಂಕ್ಷೆಗಳು ಇಲ್ಲದೇ ಜನರಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಎಂಬುದು ಬಹುಮುಖ್ಯವಾಗಿದ್ದು ಚಿಕಿತ್ಸೆಯ ಜೊತೆಗೆ ಔಷಧೀಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರನ್ನು ಗುರಿಯಾಗಿಸಿ ಈ ಔಷಧೀ ಕೇಂದ್ರವನ್ನು ಪ್ರಾರಂಭಿಸಿದ್ದು ಇದರ ಪ್ರಯೋಜನ ವಾಗುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಎಂ.ಆನಂದ್ ಕುಮಾರ್, ಆರ್ ಚಂದ್ರೇಗೌಡ, ಟಿ.ಮುನಿಯಪ್ಪ, ವೆಂಕಟಗಿರಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್ ಕೃಷ್ಣಪ್ಪ, ಚಿದಾನಂದ್, ರಮೇಶ್, ಶಾಂತಕುಮಾರಿ, ಚೌಡಮ್ಮ, ಸಿಇಓ ಎಂ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮನೋಹರ್ ಗೌಡ, ಸದಸ್ಯ ಶ್ರೀಪತಿ, ಮಾಜಿ ಸದಸ್ಯ ಬಿ.ಕೆ ರಾಮಾಂಜಿ, ಸೇರಿದಂತೆ ಗ್ರಾಮಸ್ಥರು ರೈತರು ಇದ್ದರು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…