Categories: ಕೋಲಾರ

ವಕ್ಕಲೇರಿಯಲ್ಲಿ ಜನ ಔಷಧಿ ಕೇಂದ್ರ ಉದ್ಘಾಟನೆ: ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಗಳ ಸದುಪಯೋಗ ಪಡಿಸಿಕೊಳ್ಳಿ- ಎಂ.ಪಾಲಾಕ್ಷಗೌಡ

ಕೋಲಾರ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ವತಿಯಿಂದ ಬಡವರಿಗೆ ಅನುಕೂಲವಾಗುವಂತೆ ಎಲ್ಲಾ ತರಹದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಪಾಲಾಕ್ಷಗೌಡ ತಿಳಿಸಿದರು

ತಾಲೂಕಿನ ವಕ್ಕಲೇರಿ ಗ್ರಾಮದ ಸೊಸೈಟಿ ಆವರಣದಲ್ಲಿ ಸೋಮವಾರ ಜನ ಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀಮಂತರು ಬ್ರ್ಯಾಂಡೆಡ್ ಔಷಧಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಾರೆ ಅದೇ ಗುಣಮಟ್ಟದ ಔಷಧಗಳು ಈ ಕೇಂದ್ರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಲಭ್ಯವಿದ್ದು ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕೊರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬುದು ಈ ಕೇಂದ್ರದ ಉದ್ದೇಶವಾಗಿದ್ದು ಬಡವರು ಹೆಚ್ಚಿನ ಅನುಕೂಲ ಪಡೆಯುವಂತಾಗಬೇಕು ಎಂದರು.

ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಇಡೀ ದೇಶದ ಯಾದ್ಯಂತ ಜನ ಔಷಧಿ ಕೇಂದ್ರಗಳನ್ನು ಸ್ಧಾಪಿಸಿದೆ ಶ್ರೇಷ್ಠ ಗುಣಮಟ್ಟದ ಔಷಧಿಗಳನ್ನು ಕಡಿಮೆ ಬೆಲೆಗೆ ಜನರಿಗೆ ಒದಗಿಸಲಾಗುತ್ತಾ ಇದ್ದು ಕೇಂದ್ರದಿಂದ ಯಾವುದೇ ಲಾಭದ ಆಕಾಂಕ್ಷೆಗಳು ಇಲ್ಲದೇ ಜನರಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಎಂಬುದು ಬಹುಮುಖ್ಯವಾಗಿದ್ದು ಚಿಕಿತ್ಸೆಯ ಜೊತೆಗೆ ಔಷಧೀಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರನ್ನು ಗುರಿಯಾಗಿಸಿ ಈ ಔಷಧೀ ಕೇಂದ್ರವನ್ನು ಪ್ರಾರಂಭಿಸಿದ್ದು ಇದರ ಪ್ರಯೋಜನ ವಾಗುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಎಂ.ಆನಂದ್ ಕುಮಾರ್, ಆರ್ ಚಂದ್ರೇಗೌಡ, ಟಿ.ಮುನಿಯಪ್ಪ, ವೆಂಕಟಗಿರಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್ ಕೃಷ್ಣಪ್ಪ, ಚಿದಾನಂದ್, ರಮೇಶ್, ಶಾಂತಕುಮಾರಿ, ಚೌಡಮ್ಮ, ಸಿಇಓ ಎಂ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮನೋಹರ್ ಗೌಡ, ಸದಸ್ಯ ಶ್ರೀಪತಿ, ಮಾಜಿ ಸದಸ್ಯ ಬಿ.ಕೆ ರಾಮಾಂಜಿ, ಸೇರಿದಂತೆ ಗ್ರಾಮಸ್ಥರು ರೈತರು ಇದ್ದರು

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago