Categories: ಕೋಲಾರ

ವಕ್ಕಲೇರಿಯಲ್ಲಿ ಜನ ಔಷಧಿ ಕೇಂದ್ರ ಉದ್ಘಾಟನೆ: ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಗಳ ಸದುಪಯೋಗ ಪಡಿಸಿಕೊಳ್ಳಿ- ಎಂ.ಪಾಲಾಕ್ಷಗೌಡ

ಕೋಲಾರ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ವತಿಯಿಂದ ಬಡವರಿಗೆ ಅನುಕೂಲವಾಗುವಂತೆ ಎಲ್ಲಾ ತರಹದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಪಾಲಾಕ್ಷಗೌಡ ತಿಳಿಸಿದರು

ತಾಲೂಕಿನ ವಕ್ಕಲೇರಿ ಗ್ರಾಮದ ಸೊಸೈಟಿ ಆವರಣದಲ್ಲಿ ಸೋಮವಾರ ಜನ ಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀಮಂತರು ಬ್ರ್ಯಾಂಡೆಡ್ ಔಷಧಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಾರೆ ಅದೇ ಗುಣಮಟ್ಟದ ಔಷಧಗಳು ಈ ಕೇಂದ್ರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಲಭ್ಯವಿದ್ದು ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕೊರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬುದು ಈ ಕೇಂದ್ರದ ಉದ್ದೇಶವಾಗಿದ್ದು ಬಡವರು ಹೆಚ್ಚಿನ ಅನುಕೂಲ ಪಡೆಯುವಂತಾಗಬೇಕು ಎಂದರು.

ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಇಡೀ ದೇಶದ ಯಾದ್ಯಂತ ಜನ ಔಷಧಿ ಕೇಂದ್ರಗಳನ್ನು ಸ್ಧಾಪಿಸಿದೆ ಶ್ರೇಷ್ಠ ಗುಣಮಟ್ಟದ ಔಷಧಿಗಳನ್ನು ಕಡಿಮೆ ಬೆಲೆಗೆ ಜನರಿಗೆ ಒದಗಿಸಲಾಗುತ್ತಾ ಇದ್ದು ಕೇಂದ್ರದಿಂದ ಯಾವುದೇ ಲಾಭದ ಆಕಾಂಕ್ಷೆಗಳು ಇಲ್ಲದೇ ಜನರಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಎಂಬುದು ಬಹುಮುಖ್ಯವಾಗಿದ್ದು ಚಿಕಿತ್ಸೆಯ ಜೊತೆಗೆ ಔಷಧೀಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರನ್ನು ಗುರಿಯಾಗಿಸಿ ಈ ಔಷಧೀ ಕೇಂದ್ರವನ್ನು ಪ್ರಾರಂಭಿಸಿದ್ದು ಇದರ ಪ್ರಯೋಜನ ವಾಗುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಎಂ.ಆನಂದ್ ಕುಮಾರ್, ಆರ್ ಚಂದ್ರೇಗೌಡ, ಟಿ.ಮುನಿಯಪ್ಪ, ವೆಂಕಟಗಿರಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್ ಕೃಷ್ಣಪ್ಪ, ಚಿದಾನಂದ್, ರಮೇಶ್, ಶಾಂತಕುಮಾರಿ, ಚೌಡಮ್ಮ, ಸಿಇಓ ಎಂ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮನೋಹರ್ ಗೌಡ, ಸದಸ್ಯ ಶ್ರೀಪತಿ, ಮಾಜಿ ಸದಸ್ಯ ಬಿ.ಕೆ ರಾಮಾಂಜಿ, ಸೇರಿದಂತೆ ಗ್ರಾಮಸ್ಥರು ರೈತರು ಇದ್ದರು

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

14 minutes ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

5 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

12 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

23 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago