ಕೋಲಾರ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ವತಿಯಿಂದ ಬಡವರಿಗೆ ಅನುಕೂಲವಾಗುವಂತೆ ಎಲ್ಲಾ ತರಹದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಪಾಲಾಕ್ಷಗೌಡ ತಿಳಿಸಿದರು
ತಾಲೂಕಿನ ವಕ್ಕಲೇರಿ ಗ್ರಾಮದ ಸೊಸೈಟಿ ಆವರಣದಲ್ಲಿ ಸೋಮವಾರ ಜನ ಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀಮಂತರು ಬ್ರ್ಯಾಂಡೆಡ್ ಔಷಧಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಾರೆ ಅದೇ ಗುಣಮಟ್ಟದ ಔಷಧಗಳು ಈ ಕೇಂದ್ರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಲಭ್ಯವಿದ್ದು ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕೊರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬುದು ಈ ಕೇಂದ್ರದ ಉದ್ದೇಶವಾಗಿದ್ದು ಬಡವರು ಹೆಚ್ಚಿನ ಅನುಕೂಲ ಪಡೆಯುವಂತಾಗಬೇಕು ಎಂದರು.
ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಇಡೀ ದೇಶದ ಯಾದ್ಯಂತ ಜನ ಔಷಧಿ ಕೇಂದ್ರಗಳನ್ನು ಸ್ಧಾಪಿಸಿದೆ ಶ್ರೇಷ್ಠ ಗುಣಮಟ್ಟದ ಔಷಧಿಗಳನ್ನು ಕಡಿಮೆ ಬೆಲೆಗೆ ಜನರಿಗೆ ಒದಗಿಸಲಾಗುತ್ತಾ ಇದ್ದು ಕೇಂದ್ರದಿಂದ ಯಾವುದೇ ಲಾಭದ ಆಕಾಂಕ್ಷೆಗಳು ಇಲ್ಲದೇ ಜನರಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಎಂಬುದು ಬಹುಮುಖ್ಯವಾಗಿದ್ದು ಚಿಕಿತ್ಸೆಯ ಜೊತೆಗೆ ಔಷಧೀಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರನ್ನು ಗುರಿಯಾಗಿಸಿ ಈ ಔಷಧೀ ಕೇಂದ್ರವನ್ನು ಪ್ರಾರಂಭಿಸಿದ್ದು ಇದರ ಪ್ರಯೋಜನ ವಾಗುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಎಂ.ಆನಂದ್ ಕುಮಾರ್, ಆರ್ ಚಂದ್ರೇಗೌಡ, ಟಿ.ಮುನಿಯಪ್ಪ, ವೆಂಕಟಗಿರಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್ ಕೃಷ್ಣಪ್ಪ, ಚಿದಾನಂದ್, ರಮೇಶ್, ಶಾಂತಕುಮಾರಿ, ಚೌಡಮ್ಮ, ಸಿಇಓ ಎಂ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮನೋಹರ್ ಗೌಡ, ಸದಸ್ಯ ಶ್ರೀಪತಿ, ಮಾಜಿ ಸದಸ್ಯ ಬಿ.ಕೆ ರಾಮಾಂಜಿ, ಸೇರಿದಂತೆ ಗ್ರಾಮಸ್ಥರು ರೈತರು ಇದ್ದರು
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…