Categories: ಕೋಲಾರ

ವಕ್ಕಲೇರಿಯಲ್ಲಿ ಜನ ಔಷಧಿ ಕೇಂದ್ರ ಉದ್ಘಾಟನೆ: ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಗಳ ಸದುಪಯೋಗ ಪಡಿಸಿಕೊಳ್ಳಿ- ಎಂ.ಪಾಲಾಕ್ಷಗೌಡ

ಕೋಲಾರ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ವತಿಯಿಂದ ಬಡವರಿಗೆ ಅನುಕೂಲವಾಗುವಂತೆ ಎಲ್ಲಾ ತರಹದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಪಾಲಾಕ್ಷಗೌಡ ತಿಳಿಸಿದರು

ತಾಲೂಕಿನ ವಕ್ಕಲೇರಿ ಗ್ರಾಮದ ಸೊಸೈಟಿ ಆವರಣದಲ್ಲಿ ಸೋಮವಾರ ಜನ ಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀಮಂತರು ಬ್ರ್ಯಾಂಡೆಡ್ ಔಷಧಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಾರೆ ಅದೇ ಗುಣಮಟ್ಟದ ಔಷಧಗಳು ಈ ಕೇಂದ್ರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಲಭ್ಯವಿದ್ದು ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕೊರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬುದು ಈ ಕೇಂದ್ರದ ಉದ್ದೇಶವಾಗಿದ್ದು ಬಡವರು ಹೆಚ್ಚಿನ ಅನುಕೂಲ ಪಡೆಯುವಂತಾಗಬೇಕು ಎಂದರು.

ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಇಡೀ ದೇಶದ ಯಾದ್ಯಂತ ಜನ ಔಷಧಿ ಕೇಂದ್ರಗಳನ್ನು ಸ್ಧಾಪಿಸಿದೆ ಶ್ರೇಷ್ಠ ಗುಣಮಟ್ಟದ ಔಷಧಿಗಳನ್ನು ಕಡಿಮೆ ಬೆಲೆಗೆ ಜನರಿಗೆ ಒದಗಿಸಲಾಗುತ್ತಾ ಇದ್ದು ಕೇಂದ್ರದಿಂದ ಯಾವುದೇ ಲಾಭದ ಆಕಾಂಕ್ಷೆಗಳು ಇಲ್ಲದೇ ಜನರಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಎಂಬುದು ಬಹುಮುಖ್ಯವಾಗಿದ್ದು ಚಿಕಿತ್ಸೆಯ ಜೊತೆಗೆ ಔಷಧೀಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರನ್ನು ಗುರಿಯಾಗಿಸಿ ಈ ಔಷಧೀ ಕೇಂದ್ರವನ್ನು ಪ್ರಾರಂಭಿಸಿದ್ದು ಇದರ ಪ್ರಯೋಜನ ವಾಗುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಎಂ.ಆನಂದ್ ಕುಮಾರ್, ಆರ್ ಚಂದ್ರೇಗೌಡ, ಟಿ.ಮುನಿಯಪ್ಪ, ವೆಂಕಟಗಿರಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್ ಕೃಷ್ಣಪ್ಪ, ಚಿದಾನಂದ್, ರಮೇಶ್, ಶಾಂತಕುಮಾರಿ, ಚೌಡಮ್ಮ, ಸಿಇಓ ಎಂ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮನೋಹರ್ ಗೌಡ, ಸದಸ್ಯ ಶ್ರೀಪತಿ, ಮಾಜಿ ಸದಸ್ಯ ಬಿ.ಕೆ ರಾಮಾಂಜಿ, ಸೇರಿದಂತೆ ಗ್ರಾಮಸ್ಥರು ರೈತರು ಇದ್ದರು

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

4 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago