ಕೋಲಾರ: ತಾಲ್ಲೂಕಿನ ವಕ್ಕಲೇರಿ ಗ್ರಾಮದ ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವವು ಬುಧವಾರ ಸಂಭ್ರಮದಿಂದ ನೆರವೇರಿತು ಬೆಳಗ್ಗೆ ಕೋದಂಡರಾಮಸ್ವಾಮಿಯ ಮೂರ್ತಿಗಳಿಗೆ ನಾನಾ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ನಂತರ ಸೀತಾರಾಮ ಕಲ್ಯಾಣೋತ್ಸವು ಧಾರ್ಮಿಕ ಆಚರಣೆ ಮೂಲಕ ನೆರವೇರಿಸಿದ ನಂತರ ಅಲಂಕೃತ ರಥದಲ್ಲಿ ಕೋದಂಡರಾಮಸ್ವಾಮಿ ಉತ್ಸವಮೂರ್ತಿಯನ್ನು ಕುಳ್ಳರಿಸಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು
ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಮಾತನಾಡಿ ಪ್ರತಿವರ್ಷದಂತೆ ಶ್ರೀ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಕ್ತರು ಸ್ವಾಮಿ ದರ್ಶನ ಪಡೆದಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ನಡೆದಾಗ ಮಾತ್ರ, ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯನ್ನು ಕರುಣಿಸಿ ರೈತರು ಜೀವನವನ್ನು ಅಸುನು ಮಾಡಲಿ ಎಂದು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋದಂಡರಾಮಸ್ವಾಮಿ ದೇವಾಲಯದ ಸ್ವಾಮೀಜಿಗಳಾದ ಸುಬ್ರಮಣಿ, ಮುರಳಿ, ರಾಜು, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಮುಖಂಡರಾದ ಗುರುಗಂಜಿಗುರ್ಕಿ ಮಂಡಿ ನವೀನ್ ಕುಮಾರ್, ಮನೋಹರ್, ವೆಂಕಟೇಶ್, ಟೈಲರ್ ರಾಘವೇಂದ್ರ ಮುಂತಾದವರು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…