ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ, ಹಿಂಸಾಚಾರ ನಡೆಸಿ ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ಮುಖಂಡನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಅಹ್ಮದ್ ಕಬೀರ್ ಖಾನ್ ಬಂಧಿತ ಆರೋಪಿ. ಈತ ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ತೀವ್ರ ಆಗ್ರಹ ವ್ಯಕ್ತವಾಗಿತ್ತು.
ನೀವು ಕೇವಲ ಪ್ರತಿಭಟನೆ ನಡೆಸುವುದರಿಂದ, ಡಿಸಿಗೆ ಮನವಿ ನೀಡುವುದರಿಂದ ಸಿಎಂಗೆ ಮನವಿ ನೀಡುವುದರಿಂದ ಏನೂ ಪ್ರಯೋಜನವಿಲ್ಲ. ಯುವಕರು ಈಗ ರಸ್ತೆಗೆ ಇಳಿಯಬೇಕು. ಹಳ್ಳಿ ಹಳ್ಳಿಯಲ್ಲಿ ಕನಿಷ್ಠ 10 ಜನ ಸಾಯಬೇಕು. ಏನು ಕಾಣಿಸಿದರೂ ಬೆಂಕಿ ಇಡಿ. ರೈಲಿಗೆ ಬೆಂಕಿ ಇಡಿ, ಬಸ್ ಗೆ ಬೆಂಕಿ ಇಡಿ, ಹೀಗೆ ಮಾಡಿದರೆ ಮಾತ್ರ ನಾವು ಸಾಧಿಸಲು ಸಾಧ್ಯ. ಈ ಮಸೂದೆಯನ್ನು ಇಷ್ಟು ಬೇಗ ರದ್ದು ಮಾಡಲಾಗುವುದಿಲ್ಲ. ನೂರಾರ ಜನರ ಬಲಿ ಕೊಡಬೇಕು. ಸಾಯಿಸಬೇಕು. ಹಿಂಸಾಚಾರ ನಡೆಸಬೇಕು ಆಗ ಮಾತ್ರ ಸಾಧ್ಯ ಎಂದು ಹೇಳಿದ್ದಾನೆ.
ಸ್ವಯಂಪ್ರೇರಿತವಾಗಿ ಈತನ ವಿರುದ್ದ ದೂರು ದಾಖಲಿಸಿಕೊಂಡ ಪೊಲೀಸರು ಸಾಮಾಜಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ, ಕೋಮುಗಲಭೆಗೆ ಪ್ರಚೋದನೆ, ಹಿಂಸಾಚಾರಕ್ಕೆ ಪ್ರಚೋದನೆ ಮುಂತಾದ ಆರೋಪಗಳಡಿ ಬಂಧನಕ್ಕೊಳಪಡಿಸಿದ್ದಾರೆ.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…