ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ, ಹಿಂಸಾಚಾರ ನಡೆಸಿ ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ಮುಖಂಡನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಅಹ್ಮದ್ ಕಬೀರ್ ಖಾನ್ ಬಂಧಿತ ಆರೋಪಿ. ಈತ ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ತೀವ್ರ ಆಗ್ರಹ ವ್ಯಕ್ತವಾಗಿತ್ತು.
ನೀವು ಕೇವಲ ಪ್ರತಿಭಟನೆ ನಡೆಸುವುದರಿಂದ, ಡಿಸಿಗೆ ಮನವಿ ನೀಡುವುದರಿಂದ ಸಿಎಂಗೆ ಮನವಿ ನೀಡುವುದರಿಂದ ಏನೂ ಪ್ರಯೋಜನವಿಲ್ಲ. ಯುವಕರು ಈಗ ರಸ್ತೆಗೆ ಇಳಿಯಬೇಕು. ಹಳ್ಳಿ ಹಳ್ಳಿಯಲ್ಲಿ ಕನಿಷ್ಠ 10 ಜನ ಸಾಯಬೇಕು. ಏನು ಕಾಣಿಸಿದರೂ ಬೆಂಕಿ ಇಡಿ. ರೈಲಿಗೆ ಬೆಂಕಿ ಇಡಿ, ಬಸ್ ಗೆ ಬೆಂಕಿ ಇಡಿ, ಹೀಗೆ ಮಾಡಿದರೆ ಮಾತ್ರ ನಾವು ಸಾಧಿಸಲು ಸಾಧ್ಯ. ಈ ಮಸೂದೆಯನ್ನು ಇಷ್ಟು ಬೇಗ ರದ್ದು ಮಾಡಲಾಗುವುದಿಲ್ಲ. ನೂರಾರ ಜನರ ಬಲಿ ಕೊಡಬೇಕು. ಸಾಯಿಸಬೇಕು. ಹಿಂಸಾಚಾರ ನಡೆಸಬೇಕು ಆಗ ಮಾತ್ರ ಸಾಧ್ಯ ಎಂದು ಹೇಳಿದ್ದಾನೆ.
ಸ್ವಯಂಪ್ರೇರಿತವಾಗಿ ಈತನ ವಿರುದ್ದ ದೂರು ದಾಖಲಿಸಿಕೊಂಡ ಪೊಲೀಸರು ಸಾಮಾಜಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ, ಕೋಮುಗಲಭೆಗೆ ಪ್ರಚೋದನೆ, ಹಿಂಸಾಚಾರಕ್ಕೆ ಪ್ರಚೋದನೆ ಮುಂತಾದ ಆರೋಪಗಳಡಿ ಬಂಧನಕ್ಕೊಳಪಡಿಸಿದ್ದಾರೆ.
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…