ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ, ಹಿಂಸಾಚಾರ ನಡೆಸಿ ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ಮುಖಂಡನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಅಹ್ಮದ್ ಕಬೀರ್ ಖಾನ್ ಬಂಧಿತ ಆರೋಪಿ. ಈತ ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ತೀವ್ರ ಆಗ್ರಹ ವ್ಯಕ್ತವಾಗಿತ್ತು.
ನೀವು ಕೇವಲ ಪ್ರತಿಭಟನೆ ನಡೆಸುವುದರಿಂದ, ಡಿಸಿಗೆ ಮನವಿ ನೀಡುವುದರಿಂದ ಸಿಎಂಗೆ ಮನವಿ ನೀಡುವುದರಿಂದ ಏನೂ ಪ್ರಯೋಜನವಿಲ್ಲ. ಯುವಕರು ಈಗ ರಸ್ತೆಗೆ ಇಳಿಯಬೇಕು. ಹಳ್ಳಿ ಹಳ್ಳಿಯಲ್ಲಿ ಕನಿಷ್ಠ 10 ಜನ ಸಾಯಬೇಕು. ಏನು ಕಾಣಿಸಿದರೂ ಬೆಂಕಿ ಇಡಿ. ರೈಲಿಗೆ ಬೆಂಕಿ ಇಡಿ, ಬಸ್ ಗೆ ಬೆಂಕಿ ಇಡಿ, ಹೀಗೆ ಮಾಡಿದರೆ ಮಾತ್ರ ನಾವು ಸಾಧಿಸಲು ಸಾಧ್ಯ. ಈ ಮಸೂದೆಯನ್ನು ಇಷ್ಟು ಬೇಗ ರದ್ದು ಮಾಡಲಾಗುವುದಿಲ್ಲ. ನೂರಾರ ಜನರ ಬಲಿ ಕೊಡಬೇಕು. ಸಾಯಿಸಬೇಕು. ಹಿಂಸಾಚಾರ ನಡೆಸಬೇಕು ಆಗ ಮಾತ್ರ ಸಾಧ್ಯ ಎಂದು ಹೇಳಿದ್ದಾನೆ.
ಸ್ವಯಂಪ್ರೇರಿತವಾಗಿ ಈತನ ವಿರುದ್ದ ದೂರು ದಾಖಲಿಸಿಕೊಂಡ ಪೊಲೀಸರು ಸಾಮಾಜಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ, ಕೋಮುಗಲಭೆಗೆ ಪ್ರಚೋದನೆ, ಹಿಂಸಾಚಾರಕ್ಕೆ ಪ್ರಚೋದನೆ ಮುಂತಾದ ಆರೋಪಗಳಡಿ ಬಂಧನಕ್ಕೊಳಪಡಿಸಿದ್ದಾರೆ.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…