ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ, ಹಿಂಸಾಚಾರ ನಡೆಸಿ ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ಮುಖಂಡನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಅಹ್ಮದ್ ಕಬೀರ್ ಖಾನ್ ಬಂಧಿತ ಆರೋಪಿ. ಈತ ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ತೀವ್ರ ಆಗ್ರಹ ವ್ಯಕ್ತವಾಗಿತ್ತು.
ನೀವು ಕೇವಲ ಪ್ರತಿಭಟನೆ ನಡೆಸುವುದರಿಂದ, ಡಿಸಿಗೆ ಮನವಿ ನೀಡುವುದರಿಂದ ಸಿಎಂಗೆ ಮನವಿ ನೀಡುವುದರಿಂದ ಏನೂ ಪ್ರಯೋಜನವಿಲ್ಲ. ಯುವಕರು ಈಗ ರಸ್ತೆಗೆ ಇಳಿಯಬೇಕು. ಹಳ್ಳಿ ಹಳ್ಳಿಯಲ್ಲಿ ಕನಿಷ್ಠ 10 ಜನ ಸಾಯಬೇಕು. ಏನು ಕಾಣಿಸಿದರೂ ಬೆಂಕಿ ಇಡಿ. ರೈಲಿಗೆ ಬೆಂಕಿ ಇಡಿ, ಬಸ್ ಗೆ ಬೆಂಕಿ ಇಡಿ, ಹೀಗೆ ಮಾಡಿದರೆ ಮಾತ್ರ ನಾವು ಸಾಧಿಸಲು ಸಾಧ್ಯ. ಈ ಮಸೂದೆಯನ್ನು ಇಷ್ಟು ಬೇಗ ರದ್ದು ಮಾಡಲಾಗುವುದಿಲ್ಲ. ನೂರಾರ ಜನರ ಬಲಿ ಕೊಡಬೇಕು. ಸಾಯಿಸಬೇಕು. ಹಿಂಸಾಚಾರ ನಡೆಸಬೇಕು ಆಗ ಮಾತ್ರ ಸಾಧ್ಯ ಎಂದು ಹೇಳಿದ್ದಾನೆ.
ಸ್ವಯಂಪ್ರೇರಿತವಾಗಿ ಈತನ ವಿರುದ್ದ ದೂರು ದಾಖಲಿಸಿಕೊಂಡ ಪೊಲೀಸರು ಸಾಮಾಜಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ, ಕೋಮುಗಲಭೆಗೆ ಪ್ರಚೋದನೆ, ಹಿಂಸಾಚಾರಕ್ಕೆ ಪ್ರಚೋದನೆ ಮುಂತಾದ ಆರೋಪಗಳಡಿ ಬಂಧನಕ್ಕೊಳಪಡಿಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…