ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ, ಹಿಂಸಾಚಾರ ನಡೆಸಿ ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ಮುಖಂಡನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಅಹ್ಮದ್ ಕಬೀರ್ ಖಾನ್ ಬಂಧಿತ ಆರೋಪಿ. ಈತ ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ತೀವ್ರ ಆಗ್ರಹ ವ್ಯಕ್ತವಾಗಿತ್ತು.
ನೀವು ಕೇವಲ ಪ್ರತಿಭಟನೆ ನಡೆಸುವುದರಿಂದ, ಡಿಸಿಗೆ ಮನವಿ ನೀಡುವುದರಿಂದ ಸಿಎಂಗೆ ಮನವಿ ನೀಡುವುದರಿಂದ ಏನೂ ಪ್ರಯೋಜನವಿಲ್ಲ. ಯುವಕರು ಈಗ ರಸ್ತೆಗೆ ಇಳಿಯಬೇಕು. ಹಳ್ಳಿ ಹಳ್ಳಿಯಲ್ಲಿ ಕನಿಷ್ಠ 10 ಜನ ಸಾಯಬೇಕು. ಏನು ಕಾಣಿಸಿದರೂ ಬೆಂಕಿ ಇಡಿ. ರೈಲಿಗೆ ಬೆಂಕಿ ಇಡಿ, ಬಸ್ ಗೆ ಬೆಂಕಿ ಇಡಿ, ಹೀಗೆ ಮಾಡಿದರೆ ಮಾತ್ರ ನಾವು ಸಾಧಿಸಲು ಸಾಧ್ಯ. ಈ ಮಸೂದೆಯನ್ನು ಇಷ್ಟು ಬೇಗ ರದ್ದು ಮಾಡಲಾಗುವುದಿಲ್ಲ. ನೂರಾರ ಜನರ ಬಲಿ ಕೊಡಬೇಕು. ಸಾಯಿಸಬೇಕು. ಹಿಂಸಾಚಾರ ನಡೆಸಬೇಕು ಆಗ ಮಾತ್ರ ಸಾಧ್ಯ ಎಂದು ಹೇಳಿದ್ದಾನೆ.
ಸ್ವಯಂಪ್ರೇರಿತವಾಗಿ ಈತನ ವಿರುದ್ದ ದೂರು ದಾಖಲಿಸಿಕೊಂಡ ಪೊಲೀಸರು ಸಾಮಾಜಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ, ಕೋಮುಗಲಭೆಗೆ ಪ್ರಚೋದನೆ, ಹಿಂಸಾಚಾರಕ್ಕೆ ಪ್ರಚೋದನೆ ಮುಂತಾದ ಆರೋಪಗಳಡಿ ಬಂಧನಕ್ಕೊಳಪಡಿಸಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…