ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ, ಹಿಂಸಾಚಾರ ನಡೆಸಿ ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ಮುಖಂಡನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಅಹ್ಮದ್ ಕಬೀರ್ ಖಾನ್ ಬಂಧಿತ ಆರೋಪಿ. ಈತ ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ತೀವ್ರ ಆಗ್ರಹ ವ್ಯಕ್ತವಾಗಿತ್ತು.
ನೀವು ಕೇವಲ ಪ್ರತಿಭಟನೆ ನಡೆಸುವುದರಿಂದ, ಡಿಸಿಗೆ ಮನವಿ ನೀಡುವುದರಿಂದ ಸಿಎಂಗೆ ಮನವಿ ನೀಡುವುದರಿಂದ ಏನೂ ಪ್ರಯೋಜನವಿಲ್ಲ. ಯುವಕರು ಈಗ ರಸ್ತೆಗೆ ಇಳಿಯಬೇಕು. ಹಳ್ಳಿ ಹಳ್ಳಿಯಲ್ಲಿ ಕನಿಷ್ಠ 10 ಜನ ಸಾಯಬೇಕು. ಏನು ಕಾಣಿಸಿದರೂ ಬೆಂಕಿ ಇಡಿ. ರೈಲಿಗೆ ಬೆಂಕಿ ಇಡಿ, ಬಸ್ ಗೆ ಬೆಂಕಿ ಇಡಿ, ಹೀಗೆ ಮಾಡಿದರೆ ಮಾತ್ರ ನಾವು ಸಾಧಿಸಲು ಸಾಧ್ಯ. ಈ ಮಸೂದೆಯನ್ನು ಇಷ್ಟು ಬೇಗ ರದ್ದು ಮಾಡಲಾಗುವುದಿಲ್ಲ. ನೂರಾರ ಜನರ ಬಲಿ ಕೊಡಬೇಕು. ಸಾಯಿಸಬೇಕು. ಹಿಂಸಾಚಾರ ನಡೆಸಬೇಕು ಆಗ ಮಾತ್ರ ಸಾಧ್ಯ ಎಂದು ಹೇಳಿದ್ದಾನೆ.
ಸ್ವಯಂಪ್ರೇರಿತವಾಗಿ ಈತನ ವಿರುದ್ದ ದೂರು ದಾಖಲಿಸಿಕೊಂಡ ಪೊಲೀಸರು ಸಾಮಾಜಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ, ಕೋಮುಗಲಭೆಗೆ ಪ್ರಚೋದನೆ, ಹಿಂಸಾಚಾರಕ್ಕೆ ಪ್ರಚೋದನೆ ಮುಂತಾದ ಆರೋಪಗಳಡಿ ಬಂಧನಕ್ಕೊಳಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…