ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿಗೆ ರೈತ ವಿರೋಧಿ ನಿರ್ಣಯ ಜಾರಿಗೆ ಭಾರತೀಯ ಕಿಸಾನ್ ಸಂಘ ತೀವ್ರವಾಗಿ ಖಂಡಿಸುತ್ತದೆ

ವಕ್ಫ್ ಕಾಯ್ದೆಗೆ ಇಂದಿನ ಕೇಂದ್ರ ಸರ್ಕಾರ ರೈತರ ಪರ , ಬಡ ಮುಸಲ್ಮಾನರ ಪರ ಹಾಗೂ ವಕ್ಫ್ ಬೋರ್ಡಿನ ಆಡಳಿತವನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದುಕೊಂಡು ಬಲಾಢ್ಯ ಭ್ರಷ್ಟ ಭೂ ಕಬಳಿಕೆದಾರರ ವಿರುದ್ಧ ಸುಧಾರಣಾತ್ಮಕ ಹಾಗೂ ಸಂವಿಧಾನಾತ್ಮಕ ತಿದ್ದುಪಡಿ ತರಲು ಉದ್ದೇಶಿಸಿರುವ ಮಸೂದೆಯನ್ನು ಕಾಂಗ್ರೇಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ವಿರೋಧಿಸಿ ವಿಧಾನಸಭೆಯಲ್ಲಿ ಹಿಂದೆ ಅಂಗೀಕರಿಸಿದ್ದ ರೈತ ವಿರೋಧಿ ನಿರ್ಣಯವನ್ನು ಭಾರತೀಯ ಕಿಸಾನ್ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ ಕೆ.ಎನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಭಾರತೀಯ ಕಿಸಾನ್ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಖೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ “ಕೇಂದ್ರ ಸರ್ಕಾರ ವಕ್ಫ್ ಮಂಡಳಿಯ ನಿರ್ವಹಣೆ ನಿಯಮಗಳಿಗೆ ಹೊಸದಾಗಿ ತಿದ್ದುಪಡಿ ಮಾಡಿ ದೇಶದ ಕೃಷಿ ಯೋಗ್ಯ, ಸರ್ಕಾರಿ ರೈತರ ಹಾಗೂ ಇತರೆ ಜಮೀನನ್ನು ಮಂಡಳಿ ಕಬಳಿಸುವ ಅವಕಾಶಕ್ಕೆ ತಡೆಯೊಡ್ಡಿರುವುದನ್ನು ಭಾರತೀಯ ಕಿಸಾನ್ ಸಂಘದ ಸಮಸ್ತ ರೈತರ ಪರವಾಗಿ ಸ್ವಾಗತಿಸುತ್ತದೆ” ಎಂದರು.

ಯಾವುದೇ ದಾಖಲೆಗಳಿಲ್ಲದೆ ಈ ದೇಶದ ಯಾವುದೇ ಆಸ್ತಿಯನ್ನು ಬೋರ್ಡ್ ಆಸ್ತಿ ಎಂದು ಘೋಷಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ 1995ರ ಬೋರ್ಡ್ ತಿದ್ದುಪಡಿ ಕಾಯ್ದೆ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತ್ತು ಹೀಗಾಗಿ ಮತ್ತೆ ಹೆಚ್ಚುವರಿಯಾಗಿ ಈ ದೇಶದ ರೈತರ ಲಕ್ಷಾಂತರ ಎಕರೆ ಕೃಷಿ ಭೂಮಿ ಜಮೀನು ಬಾಲಾಗಲು ಕಾರಣವಾಗಿತ್ತು ಹಾಗಾಗಿ ಇಂದು ಕಳೆದ ಹತ್ತು ವರ್ಷದಲ್ಲಿ 21ಲಕ್ಷ ಹೆಕ್ಟೇರ್ ಭೂಮಿಯನ್ನು ವಕ್ಫ್ ಮಂಡಳಿಯು ಕಬಳಿಸಿದ್ದಾರೆ, ಈ ದೇಶದ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಾ ಮಸೂದೆಯ ವಿರುದ್ಧ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ನಿಲುವನ್ನು ಸಹ ಭಾರತೀಯ ಕಿಸಾನ್ ಸಂಘ ವಿರೋಧಿಸುತ್ತದೆ ಎಂದು ಹೇಳಿದರು.

ಭಾರತೀಯ ಕಿಸಾನ್ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರು ನಾಗರಾಜಯ್ಯ ಮಾತನಾಡಿ ಈ ದೇಶದ ರೈತರು, ಸಾಮಾನ್ಯ ಜನರ ಪರವಾಗಿ, ಬಲಾಡ್ಯರು ಭ್ರಷ್ಟರು ಭೂ ಕಬಳಿಕೆದಾರರ ವಿರುದ್ಧ ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರದ ಗಟ್ಟಿಯಾದ ನಿಲುವನ್ನು ಭಾರತೀಯ ಕಿಸಾನ್ ಸಂಘ
ಅಭಿನಂದಿಸುತ್ತದೆ. ವಕ್ಫ್ ಬೋರ್ಡ್ ಇಂದಿನ ಕಾಂಗ್ರೆಸ್ ನೇತೃತ್ವ ಸರ್ಕಾರ ನೀಡಿದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಹಾಗೂ ಕಾಂಗ್ರೆಸ್ ನೇತೃತ್ವ ಕರ್ನಾಟಕ ರಾಜ್ಯ ಸರ್ಕಾರ ಕಳೆದ ಮೂರು ತಿಂಗಳಲ್ಲಿ ಹಾಲಿನ ದರವನ್ನು ಗ್ರಾಹಕರಿಗೆ ಪ್ರತಿ ಲೀಟರ್ ಗೆ 9 ರೂಪಾಯಿ ಹೆಚ್ಚಿಸಿ ಹಾಲು ಉತ್ಪಾದಕರ ರೈತರಿಗೆ ಕೇವಲ ಎರಡು ರೂಪಾಯಿ ಹೆಚ್ಚಿಸಿರುವುದು ಖಂಡನಿಯ ಎಂದು ಅಗ್ರಹಿಸಿ ಮುಂದಿನ ದಿನಗಳಲ್ಲಿ ಕೆಎಂಎಫ್ ಹಾಲು ಉತ್ಪಾದಕ ರೈತರನ್ನು ವಂಚಿಸಿ ಗ್ರಾಹಕರಿಗೆ ಹೊರೆಯಾಗುವಂತೆ ಮಾಡಿ ಹಾಲು ,
ಮೊಸರು, ಮಜ್ಜಿಗೆ ಮತ್ತು ತುಪ್ಪ ಮಾರಾಟದಲ್ಲಿಯೂ ರೈತರಿಗೆ ಮೋಸ ಮಾಡಿ ಲಾಭಗಳಿಸುತ್ತಿದೆ .ಹಾಲು ಸಂಸ್ಕರಣ ವೆಚ್ಚವನ್ನು ಕಡಿಮೆ ಮಾಡಿ ರೈತರಿಗೆ ಲಾಭದಾಯಕ ಬೆಲೆಯನ್ನು ನೀಡಬೇಕೆಂದು ಭಾರತೀಯ ಕಿಸಾನ್ ಸಂಘ ಒತ್ತಾಯಿಸುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಖೆಯ ಉಪಾಧ್ಯಕ್ಷ ಅಂಜಿನಪ್ಪ ಯಲೆಯೂರು, ಖಜಾಂಚಿ ಚನ್ನಿಗರಾಯಪ್ಪ, ಜಿಲ್ಲಾ ಸಮಿತಿ ಕಾರ್ಯದರ್ಶಿ ಆರ್ .ಅಂಬಿಕಾ, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ಶಶಿಧರ್ ಬೈಜಾಪುರ ,ಭಾಗ್ಯವಂತ. ಸೇರಿದಂತೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 seconds ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

3 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago