Categories: ಕೋಲಾರ

ವಕ್ಫ್ ಬೋರ್ಡ್‌ ಹಿಂದೂಗಳ ಜಮೀನು ಕಬಳಿಕೆ ಖಂಡನೀಯ: ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ಧ- ಓಂ ಶಕ್ತಿ ಚಲಪತಿ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್‌ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್‌ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.

ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.

Ramesh Babu

Journalist

Recent Posts

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

6 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

8 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

8 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

9 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

11 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

20 hours ago