ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.
ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…