Categories: ಕೋಲಾರ

ವಕ್ಫ್ ಬೋರ್ಡ್‌ ಹಿಂದೂಗಳ ಜಮೀನು ಕಬಳಿಕೆ ಖಂಡನೀಯ: ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ಧ- ಓಂ ಶಕ್ತಿ ಚಲಪತಿ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್‌ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್‌ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.

ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

4 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

16 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

17 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

18 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

18 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago