ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.
ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…