ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.
ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…