ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.
ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…