ತಾಲ್ಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಸೇರಿದಂತೆ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ನಡೆಸುವಂತೆ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಕಂದಾಯ ರಾಜಸ್ವ ನಿರೀಕ್ಷೆಗೆ ಲಿಖಿತ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.
ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಭೂಮಿ ಒತ್ತುವರಿ ಕುರಿತಂತೆ ಕಳೆದ ಆರು ತಿಂಗಳಿಂದಲೂ ಗ್ರಾಮದಲ್ಲಿ ಪರ ವಿರೋಧಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳನ್ನು ಸರ್ವೆ ನಡೆಸಿ ಒತ್ತುವರಿಯಾಗಿರುವ ನಕ್ಷೆಯನ್ನು ಸಿದ್ದಪಡಿಸಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಸಬಾ ಹೋಬಳಿಯಲ್ಲಿನ ಇತರೆ ಗ್ರಾಮಗಳಿಗೆ ಹೋಲಿಕೆ ಮಾಡಿದರೆ ವಡ್ಡರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹೆಚ್ಚಿನ ಸರ್ಕಾರಿ ಜಮೀನು ಇದೆ. ಹೀಗಾಗಿ ಒತ್ತುವರಿಯು ಹೆಚ್ಚಾಗಿರುವ ಬಗ್ಗೆ ಗ್ರಾಮದ ಸಾರ್ವಜನಿಕರಿಂದ ತಾಲ್ಲೂಕು ಕಚೇರಿ ಸೇರಿದಂತೆ ಕಂದಾಯ ಇಲಾಖೆಯ ಇತರೆ ಕಚೇರಿಗಳಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…