ತಾಲ್ಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಸೇರಿದಂತೆ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ನಡೆಸುವಂತೆ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಕಂದಾಯ ರಾಜಸ್ವ ನಿರೀಕ್ಷೆಗೆ ಲಿಖಿತ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.
ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಭೂಮಿ ಒತ್ತುವರಿ ಕುರಿತಂತೆ ಕಳೆದ ಆರು ತಿಂಗಳಿಂದಲೂ ಗ್ರಾಮದಲ್ಲಿ ಪರ ವಿರೋಧಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳನ್ನು ಸರ್ವೆ ನಡೆಸಿ ಒತ್ತುವರಿಯಾಗಿರುವ ನಕ್ಷೆಯನ್ನು ಸಿದ್ದಪಡಿಸಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಸಬಾ ಹೋಬಳಿಯಲ್ಲಿನ ಇತರೆ ಗ್ರಾಮಗಳಿಗೆ ಹೋಲಿಕೆ ಮಾಡಿದರೆ ವಡ್ಡರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹೆಚ್ಚಿನ ಸರ್ಕಾರಿ ಜಮೀನು ಇದೆ. ಹೀಗಾಗಿ ಒತ್ತುವರಿಯು ಹೆಚ್ಚಾಗಿರುವ ಬಗ್ಗೆ ಗ್ರಾಮದ ಸಾರ್ವಜನಿಕರಿಂದ ತಾಲ್ಲೂಕು ಕಚೇರಿ ಸೇರಿದಂತೆ ಕಂದಾಯ ಇಲಾಖೆಯ ಇತರೆ ಕಚೇರಿಗಳಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…