ತಾಲ್ಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಸೇರಿದಂತೆ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ನಡೆಸುವಂತೆ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಕಂದಾಯ ರಾಜಸ್ವ ನಿರೀಕ್ಷೆಗೆ ಲಿಖಿತ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.
ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಭೂಮಿ ಒತ್ತುವರಿ ಕುರಿತಂತೆ ಕಳೆದ ಆರು ತಿಂಗಳಿಂದಲೂ ಗ್ರಾಮದಲ್ಲಿ ಪರ ವಿರೋಧಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳನ್ನು ಸರ್ವೆ ನಡೆಸಿ ಒತ್ತುವರಿಯಾಗಿರುವ ನಕ್ಷೆಯನ್ನು ಸಿದ್ದಪಡಿಸಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಸಬಾ ಹೋಬಳಿಯಲ್ಲಿನ ಇತರೆ ಗ್ರಾಮಗಳಿಗೆ ಹೋಲಿಕೆ ಮಾಡಿದರೆ ವಡ್ಡರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹೆಚ್ಚಿನ ಸರ್ಕಾರಿ ಜಮೀನು ಇದೆ. ಹೀಗಾಗಿ ಒತ್ತುವರಿಯು ಹೆಚ್ಚಾಗಿರುವ ಬಗ್ಗೆ ಗ್ರಾಮದ ಸಾರ್ವಜನಿಕರಿಂದ ತಾಲ್ಲೂಕು ಕಚೇರಿ ಸೇರಿದಂತೆ ಕಂದಾಯ ಇಲಾಖೆಯ ಇತರೆ ಕಚೇರಿಗಳಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…