ತಾಲ್ಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಸೇರಿದಂತೆ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ನಡೆಸುವಂತೆ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಕಂದಾಯ ರಾಜಸ್ವ ನಿರೀಕ್ಷೆಗೆ ಲಿಖಿತ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.
ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಭೂಮಿ ಒತ್ತುವರಿ ಕುರಿತಂತೆ ಕಳೆದ ಆರು ತಿಂಗಳಿಂದಲೂ ಗ್ರಾಮದಲ್ಲಿ ಪರ ವಿರೋಧಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳನ್ನು ಸರ್ವೆ ನಡೆಸಿ ಒತ್ತುವರಿಯಾಗಿರುವ ನಕ್ಷೆಯನ್ನು ಸಿದ್ದಪಡಿಸಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಸಬಾ ಹೋಬಳಿಯಲ್ಲಿನ ಇತರೆ ಗ್ರಾಮಗಳಿಗೆ ಹೋಲಿಕೆ ಮಾಡಿದರೆ ವಡ್ಡರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹೆಚ್ಚಿನ ಸರ್ಕಾರಿ ಜಮೀನು ಇದೆ. ಹೀಗಾಗಿ ಒತ್ತುವರಿಯು ಹೆಚ್ಚಾಗಿರುವ ಬಗ್ಗೆ ಗ್ರಾಮದ ಸಾರ್ವಜನಿಕರಿಂದ ತಾಲ್ಲೂಕು ಕಚೇರಿ ಸೇರಿದಂತೆ ಕಂದಾಯ ಇಲಾಖೆಯ ಇತರೆ ಕಚೇರಿಗಳಿಗೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…