ವಧುವಿಗೆ ತೊಡಿಸಲೆಂದು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮದುವೆ ಮನೆಯಲ್ಲೇ ಕಳ್ಳತನವಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ರೈತ ಭವನದಲ್ಲಿ ನಡೆದಿದೆ.
ಸಂಬಂಧಿಕರ ಸೋಗಿನಲ್ಲಿ ಬಂದ ಯುವಕನಿಂದಲೇ ಕಳ್ಳತನ ಆಗಿದೆ ಎಂದು ಶಂಕಿಸಲಾಗಿದೆ. ಒಂದು ಚಿನ್ನದ ಕಡಗ, ಒಂದು ಜೋತೆ ಓಲೆ, ಚಿನ್ನದ ನೆಕ್ಲೇಸ್ ಜೊತೆಗೆ 5,000 ರೂ. ಕದ್ದು ಪರಾರಿಯಾಗಿದ್ದಾನೆ ಎಂದು ವಧುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆ ಸಂಬಂಧ ಕುಶಾಲನಗರ ನಗರ ಠಾಣೆಗೆ ವಧುವಿನ ಪೋಷಕರು ದೂರು ನೀಡಿದ್ದಾರೆ. ನಂತರ ಮದುವೆ ಮಂಟಪಕ್ಕೆ ತೆರಳಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ. ಮುಂದಿನ ತನಿಖೆ ಕೈಗೊಂಡಿದ್ದು, ಕಳ್ಳನಿಗಾಗಿ ಬಲೆ ಬೀಸಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…