ವನ್ಯಜೀವಿ ಬೇಟೆ: ಕಾಡು ಹಂದಿ ಸಾರು, ಆಮೆ ಸುಕ್ಕಾ ಸಮೇತ ಮೂವರ ಬಂಧನ

ಶಿರಸಿ: ವನ್ಯಜೀವಿಗಳ ಬೇಟೆ ಮತ್ತು ಅವುಗಳ ಮಾಂಸದಿಂದ ಅಡುಗೆ ತಯಾರಿಸುತ್ತಿದ್ದ ಜಾಲದ ಮೇಲೆ ಶಿರಸಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬನವಾಸಿ ವಲಯದ ಎಕ್ಕಂಬಿ ಸಮೀಪದ ಮೂಡೆಬೈಲ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಬನವಾಸಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೂಡೆಬೈಲ್‌ನ ಶಂಕರ ಲಕ್ಷ್ಮಣ ನಾಯ್ಕ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಕಾಡು ಹಂದಿಯ ಸಾರು ಮತ್ತು ಆಮೆಯ ಸುಕ್ಕಾ ತಯಾರಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಡುಹಂದಿ ಮಾಂಸ ಹಾಗೂ ಆಮೆಯ ಮಾಂಸವನ್ನು ಪಾತ್ರೆಗಳ ಸಮೇತ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಂಕರ ಲಕ್ಷ್ಮಣ ನಾಯ್ಕ, ಗಂಗಾಧರ ಗಣಪತಿ ಗೌಡ, ಮತ್ತು ಶಂಕರ ಬೊಮ್ಮು ಗೌಡ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ರವಿ ಮಾದೇವ ಗೌಡ ಮತ್ತು ಗಣಪತಿ ಬೊಮ್ಮು ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬನವಾಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ ಅವರ ನೇತೃತ್ವದ ಉಪವಲಯ ಅಧಿಕಾರಿ ಗಜೇಂದ್ರ ಮೊಗೇರ, ಬಾಲರಾಜ ಡಿ, ಯಶೋಧಾ ನಾಯ್ಕ, ಮಂಜುನಾಥ ಗಂಗಮತ, ಗಸ್ತು ಅರಣ್ಯ ಪಾಲಕರಾದ ಭೋಜು ಚೌಹಾಣ್, ಅಮೃತ್ ಅರಿಬೆಂಚಿ ಕನಕಪ್ಪ ತಳವಾರ, ಮಲ್ಲಿಕಾರ್ಜುನ ಗುದಗಿ, ಮತ್ತು ರಮೇಶ್ ಎಚ್ ಸಿ, ಅರಣ್ಯ ವೀಕ್ಷಕರಾದ ಈಶ್ವರಪ್ಪ ಎಚ್.ಎಸ್ ಹಾಗೂ ಮಂಜುನಾಥ ಜೆ ನಾಯ್ಕ ಹಾಗೂ ಸಿಬ್ಬಂದಿಗಳು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಬೇಟೆಯ ಕುರಿತು ಅರಣ್ಯ ಇಲಾಖೆ ತನಿಖೆ ಮುಂದುವರೆಸಿದೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

9 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

15 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

18 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

18 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

21 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

23 hours ago