ಶಿರಸಿ: ವನ್ಯಜೀವಿಗಳ ಬೇಟೆ ಮತ್ತು ಅವುಗಳ ಮಾಂಸದಿಂದ ಅಡುಗೆ ತಯಾರಿಸುತ್ತಿದ್ದ ಜಾಲದ ಮೇಲೆ ಶಿರಸಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬನವಾಸಿ ವಲಯದ ಎಕ್ಕಂಬಿ ಸಮೀಪದ ಮೂಡೆಬೈಲ್ನಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಬನವಾಸಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೂಡೆಬೈಲ್ನ ಶಂಕರ ಲಕ್ಷ್ಮಣ ನಾಯ್ಕ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಕಾಡು ಹಂದಿಯ ಸಾರು ಮತ್ತು ಆಮೆಯ ಸುಕ್ಕಾ ತಯಾರಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಡುಹಂದಿ ಮಾಂಸ ಹಾಗೂ ಆಮೆಯ ಮಾಂಸವನ್ನು ಪಾತ್ರೆಗಳ ಸಮೇತ ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಂಕರ ಲಕ್ಷ್ಮಣ ನಾಯ್ಕ, ಗಂಗಾಧರ ಗಣಪತಿ ಗೌಡ, ಮತ್ತು ಶಂಕರ ಬೊಮ್ಮು ಗೌಡ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ರವಿ ಮಾದೇವ ಗೌಡ ಮತ್ತು ಗಣಪತಿ ಬೊಮ್ಮು ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಬನವಾಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ ಅವರ ನೇತೃತ್ವದ ಉಪವಲಯ ಅಧಿಕಾರಿ ಗಜೇಂದ್ರ ಮೊಗೇರ, ಬಾಲರಾಜ ಡಿ, ಯಶೋಧಾ ನಾಯ್ಕ, ಮಂಜುನಾಥ ಗಂಗಮತ, ಗಸ್ತು ಅರಣ್ಯ ಪಾಲಕರಾದ ಭೋಜು ಚೌಹಾಣ್, ಅಮೃತ್ ಅರಿಬೆಂಚಿ ಕನಕಪ್ಪ ತಳವಾರ, ಮಲ್ಲಿಕಾರ್ಜುನ ಗುದಗಿ, ಮತ್ತು ರಮೇಶ್ ಎಚ್ ಸಿ, ಅರಣ್ಯ ವೀಕ್ಷಕರಾದ ಈಶ್ವರಪ್ಪ ಎಚ್.ಎಸ್ ಹಾಗೂ ಮಂಜುನಾಥ ಜೆ ನಾಯ್ಕ ಹಾಗೂ ಸಿಬ್ಬಂದಿಗಳು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಬೇಟೆಯ ಕುರಿತು ಅರಣ್ಯ ಇಲಾಖೆ ತನಿಖೆ ಮುಂದುವರೆಸಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…